LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ವಚ್ಚ ಸಂಡೇ ಅಭಿಯಾನ - ರಾಶಿ ರಾಶಿ ಬಿದ್ದಿದ್ದ ಕಸದ ರಾಶಿಯನ್ನು ಸ್ವಚ್ಛ ಮಾಡಿದರು ಬಿಜೆಪಿ ಯುವ ಮೋರ್ಚಾ ಘಟಕದವರು

ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71 ರ ಯುವಮೋರ್ಚಾ ಘಟಕದ ಸ್ವಚ್ಛ ಸಂಡೇ ಕಾರ್ಯಕ್ರಮ ಧಾರವಾಡದಲ್ಲಿ ಮುಂದುವರೆದಿದೆ‌‌.

ಈ ರವಿವಾರ ಇಂದು ಬಿಜೆಪಿ ಯುವ ಮೋರ್ಚಾ ದವರು ಸ್ವಚ್ಚತೆಗೆ ಆಯ್ಕೆ ಮಾಡಿಕೊಂಡ ಸ್ಥಳ ಐತಿಹಾಸಿಕ ಧಾರವಾಡದ ಮುರುಘಾಮಠ.

ರವಿವಾರ ತಪ್ಪದೇ ಒಂದೊಂದು ಸ್ಥಳವನ್ನು ಕ್ಲೀನ್ ಮಾಡಿಕೊಂಡು ಬರುತ್ತಿದ್ದು ಈ ವಾರ ನಗರದ ಮುರುಘಾಮಠ ವನ್ನು ಸ್ವಚ್ಚತೆ ಮಾಡಲಾಯಿತು.

ಮುಂದಿನವಾರ ಮುರುಘಾಮಠದ ಜಾತ್ರೆ ಇದೆ ಹೀಗಾಗಿ ಬಿಜೆಪಿ ಯುವ ಘಟಕದ ವತಿಯಿಂದ ಇಂದು ಧಾರವಾಡದ ವಾರ್ಡ್ ನಂಬರ್ 6 ರ ಸುಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಸಂಪೂರ್ಣ ಮಠದ ಆವರಣವನ್ನು ಸ್ವಚ್ಚತೆ ಮಾಡಿದರು.

ಮಠದಲ್ಲಿ ಸ್ವಾಮಿಜಿ ಮಲ್ಲಿಕಾರ್ಜುನ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ, ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡಲಾಯಿತು.

ಎರಡು ಮೂರು ಘಂಟೆಗಳ ಕಾಲ ಮಠದ ಆವರಣದಲ್ಲಿ ಸಂಪೂರ್ಣವಾಗಿ ಸ್ವಚ್ಚತಾ ಕಾರ್ಯ ಮಾಡಲಾಯಿತು.

ಪ್ರತಿ ರವಿವಾರಕ್ಕೊಮ್ಮೆ ಒಂದೊಂದು ಸಾರ್ವಜನಿಕ ಸ್ಥಳದಲ್ಲಿ ಕ್ಲೀನ್ ಮಾಡಿಕೊಂಡು ಬರುತ್ತಿದ್ದು ಜಾತ್ರೆ ಹಿನ್ನಲೆಯಲ್ಲಿ ಮಠದ ಆವರಣದಲ್ಲಿ ಮತ್ತು ಸುತ್ತ ಮುತ್ತಲೂ ಸ್ವಚ್ಚತೆ ಮಾಡಿದರು.

ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಕಿರಣ ಉಪ್ಪಾರ್, ಮಂಡಳ ಅಧ್ಯಕ್ಷ ಸುನೀಲ ಮೋರೆ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಶ್ರೀ ಸಿದ್ದು ಕಲ್ಯಾಣ ಶೆಟ್ಟಿ, ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಾಯಕ ಗೊಂಧಳಿ,

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಅಳಗವಾಡಿ, ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ, ಪಕ್ಷದ ಹಿರಿಯರಾದ ಪುಷ್ಪಾ ನವಲಗುಂದ,ನಿಂಗಪ್ಪ ಸಪೂರಿ, ಜಗದೀಶ್ ಚಿಕ್ಕಮಠ, ಕಪಿಲ ಶಿರಹಟ್ಟಿ, ಲತಾ ಕೆರಿಮಠ, ಮಾದೇವಿ ಕೌದಿ, ಮಾಲತಿ ಬರಗಿ, ರಾಹುಲ್ ಅಷ್ಟಗಿ ಯುವಮೋರ್ಚಾ ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ, ಕಾರ್ತಿಕ ಪೂಜಾರ್,

ಸಚಿನ ಚವಾಣ್, ಸೂರಂಜನ್ ಗೂಂಡೆ, ಸಾಗರ್ ಜೋಶಿ, ರಾಜೇಶ್ ನಾಯ್ಕ್ , ಅಮೃತ ಹೆಬ್ಬಳ್ಳಿ, ರವಿ ಮಾಳಗಾರ್, ವಿನಾಯಕ ಭೋಳೆ, ಪೃಥ್ವಿ ಚಿತಗುಬ್ಬಿ, ರೋಹಿತ, ಸಾಯಿಪ್ರಸಾದ, ಗಂಗನಗೌಡ, ನಿಂಗನಗೌಡ, ಹೇಮಂತ್, ನಾಗರಾಜ್ ಹಾಗೂ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಸ್ವಚ್ಚತಾ ಸಂಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಚತೆಗೆ ಸಾಥ್ ನೀಡಿದರು‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....