LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಡುಗೆ ಸಹಾಯಕಿ ಜೊತೆಯಲ್ಲಿ ಶಿಕ್ಷಕ ಸೆಲ್ಪಿ ಪೊಟೊ - ಸಾರ್ವಜನಿ ಕರ ದೂರಿನಿಂದ ಶಿಕ್ಷಕ ಅಮಾನತು

ದಾವಣಗೆರೆ -

ಮಾಡಬಾರದ ಕೆಲಸ ಮಾಡಿದಕ್ಕೆ ಶಿಕ್ಷಕನೊರ್ವ ಅಮಾನತು ಆಗಿರುವ ಘಟನೆ ದಾವಣಗೆರೆ ಜಿಲ್ಲೆ ಯಲ್ಲಿ ನಡೆದಿದೆ.ಹೌದು ಇದಕ್ಕೆ ತಾಜಾ ಉದಾಹರಣೆ ಪಠ್ಯಕ್ಕಿಂತ ಪಠ್ಯೇತರ ಚಟುವಟಿಕೆಗಳಲ್ಲಿಯೇ ಹೆಚ್ಚು ಆಸಕ್ತಿ ಹೊಂದಿದ್ದ ಜಿಲ್ಲೆಯಲ್ಲಿನ ಶಿಕ್ಷಕ ಆಂಜನೇಯ ನಾಯ್ಕ ಅಮಾನತಾಗಿರುವ ಶಿಕ್ಷಕನಾಗಿದ್ದಾರೆ.ಹೌದು ಶಾಲೆ ಇಲ್ಲದಿದ್ದರೂ ಪ್ರತಿದಿನ ಶಾಲೆಗೆ ಬರುವ ಶಿಕ್ಷಕ, ಬಿಸಿಯೂಟ ಅಡುಗೆ ಸಹಾಯಕಿಯ ಜೊತೆ ಸೆಲ್ಫಿ ತೆಗೆಸಿಕೊಂಡು ಗ್ರೂಪ್ ಗಳಿಗೆ ಪೊಟೊ ಹಾಕುತ್ತಿದ್ದ. ಇದೊಂದೆ ಅಲ್ಲ. ಹತ್ತಾರು ಕಾರಣಕ್ಕೆ ಈತನಿಂದ ಇಡೀ ಗ್ರಾಮಸ್ಥರಿಗೆ ಬೇಸರವಾಗುತ್ತಿತ್ತು. ಮೇಲಾಧಿ ಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಗ್ರಾಮಸ್ಥರು ನೇರವಾಗಿ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿ ದ್ದರು.ಹೀಗಾಗಿ ಶಿಕ್ಷಕ ಆಂಜನೇಯ ನಾಯ್ಕ್ ಅವರ ನ್ನು ಅಮಾನತು ಮಾಡಲಾಗಿದೆ.

ಅಡುಗೆ ಸಹಾಯಕಿ ಅವರೊಂದಿಗೆ ಶಿಕ್ಷಕ

ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕ. ಕೊರೊನಾ ಕಾರಣ ಶಾಲೆಗಳು ಬಂದ್ ಆಗಿವೆ. ಆದರೆ ಈತ ನಿತ್ಯ ಶಾಲೆಗೆ ಬಂದು ಅಡುಗೆ ಸಹಾಯ ಕಿಯರನ್ನು ಕರೆಸುತ್ತಿದ್ದ.ಅಲ್ಲದೇ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನ ವಿವಿಧ ಗ್ರೂಪ್ ಗಳಿಗೆ ಹಾಕುತ್ತಿದ್ದನಂತೆ.ಅಲ್ಲದೇ ಶಾಲೆಗಳು ತೆರೆದಿದ್ದಾಗ ಈತ ಕುಡಿದು ಬರುತಿದ್ದನಂತೆ ಜೊತೆಗೆ ಮಕ್ಕಳಿಂದ ಗುಟ್ಕಾವನ್ನು ಕೂಡಾ ತರಿಸುತ್ತಿದ್ದನಂತೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್

ಎರಡು ವರ್ಷದ ಹಿಂದೆ ಓರ್ವ ಮಹಿಳೆ ಈತನ ವಿರುದ್ಧ ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದು ಇನ್ನೂ ಕೂಡಾತನಿಖೆ ನಡೆಯುತ್ತಿದೆ ಗ್ರಾಮಸ್ಥರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ದೂರು ನೀಡಿದ್ದರು.ಹೀಗೆ ದೂರು ನೀಡಿದ ತಕ್ಷಣವೇ ಸಚಿವರು ಜಾಗೃತರಾಗಿ ದಾವಣಗೆರೆ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರಿಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಆದೇಶ ನೀಡಿದ್ದರು.ಪರಮೇಶ್ವರಪ್ಪ ನಡೆಸಿದ ತನಿಖೆಯಲ್ಲಿ ಗ್ರಾಮಸ್ಥರು ಮಾಡಿದ ಆರೋಪಗಳು ಸತ್ಯವಾಗಿ ದ್ದವು. ಜೊತೆಗೆ ಗ್ರಾಮದ ಬಹುತೇಕರು ಇತನ ವಿರುದ್ಧ ದೂರು ಹೇಳಿದರು.ಎಲ್ಲ ಸಾಕ್ಷಿಗಳನ್ನು ಆಧಾರಿಸಿ ಶಿಕ್ಷಕ ಆಂಜನೇಯ ನಾಯ್ಕ ಎಂಬಾತ ನನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....