LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಶಿಕ್ಷಕರ ವರ್ಗಾವಣೆ ಗೆ ತಡೆ ವರ್ಗಾವಣೆ ಪ್ರಕ್ರಿಯೆ ತಡೆ ಯಿಂದಾಗಿ ಆತಂಕದಲ್ಲಿ ಶಿಕ್ಷಕರು.....

ಬೆಂಗಳೂರು -

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(KSAT) ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ಯನ್ನು ನೀಡಿದ್ದು ವೃಂದ ವಾರು ಕೌನ್ಸೆಲಿಂಗ್ ನಡೆಸುವ ಮೂಲಕ ಪುನಃ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಂತೆ ತಿಳಿಸಿದೆ.ಒಂದರಿಂದ ಐದನೇ ತರಗತಿ ಪಾಠ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಶಿಕ್ಷಕರ ಹುದ್ದೆಗಳಿಗೆ ವರ್ಗಾಯಿಸುವುದಕ್ಕೆ ತಡೆ ನೀಡಲಾಗಿದೆ.ಪುನಃ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಹೇಳಲಾಗಿದೆ.

ಪ್ರಾಥಮಿಕ ಶಾಲೆಯ ಪಿ.ಎಸ್.ಟಿ. ಶಿಕ್ಷಕರನ್ನು ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಜಿಪಿಟಿ ಶಿಕ್ಷಕರ ಹುದ್ದೆ ಗಳಿಗೆ ನಿಯೋಜಿಸಲು ತಡೆ ನೀಡಲಾಗಿದ್ದು ಆರರಿಂದ ಎಂಟನೇ ತರಗತಿ ಪಾಠ ಮಾಡಲು ಪದವೀಧರ ಶಿಕ್ಷಕರನ್ನೇ ನಿಯೋಜಿಸಬೇಕು.ಈಗಾಗಲೇ ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ವರ್ಗಾವಣೆಗೊಂಡ ಶಿಕ್ಷಕರನ್ನು ನಿಯೋಜಿತ ಶಿಕ್ಷಕರು ಎಂದು ಪರಿಗಣಿಸಬೇಕು.ವೃಂದವಾರು ಮರು ಕೌನ್ಸೆಲಿಂಗ್ ನಡೆಸುವ ಮೂಲಕ ಪುನಃ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳ ಬೇಕು.ಎರಡು ತಿಂಗಳೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶದಿಂದಾಗಿ ವರ್ಗಾವಣೆ ಪ್ರಕ್ರಿಯೆಗೆ ಮತ್ತೆ ಅನಿಶ್ಚಿ ತತೆ ಉಂಟಾಗಿದ್ದು ಸಾವಿರಾರು ಪ್ರಾಥಮಿಕ ಶಾಲಾ ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.2020 -21 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ 75,000 ಶಿಕ್ಷಕರು ಅರ್ಜಿ ಸಲ್ಲಿಸಿದ್ದು 21,000 ಶಿಕ್ಷಕರ ವರ್ಗಾವಣೆ ಪಡೆದುಕೊಂಡಿದ್ದಾರೆ. ಸುಮಾರು 5000 ಕ್ಕೂ ಹೆಚ್ಚು ಪಿ.ಎಸ್.ಟಿ. ಶಿಕ್ಷಕರು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ವರ್ಗಾವಣೆಗೊಂಡಿದ್ದು ಮರು ವರ್ಗಾ ವಣೆ ನಡೆದರೆ ಇವರೆಲ್ಲರೂ ತಮ್ಮ ಮೂಲ ಸ್ಥಾನಗಳಿಗೆ ವಾಪಸ್ ಆಗುವ ಸಾಧ್ಯತೆ ಇದ್ದು ಇದರಿಂದಾಗಿ ಶಿಕ್ಷಕ ವಲಯದಲ್ಲಿ ಮತ್ತೆ ಆತಂಕ ಎದುರಾಗಿದೆ ಎನ್ನಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....