LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಆರಂಭಗೊಂಡಿತು ಕಲಿಕಾ ಚೇತರಿಕೆ ಕಾರ್ಯಕ್ರಮ ತರಬೇತಿ ಯಲ್ಲಿ ಪಾಲ್ಗೊಂಡಿದ್ದಾರೆ ಶಿಕ್ಷಕರು

ಬೆಳಗಾವಿ ತಾಲ್ಲೂಕಿನ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿ ಕಾರ್ಯಕ್ರಮ ಆರಂಭಗೊಂಡಿದೆ.ಹೌದು ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ 6 ರಿಂದ 7 ತರಗತಿ ಬೋಧಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಿಕ್ಷಕರಿಗೆ ಮುತಗಾ ಗ್ರಾಮದ ನ್ಯೂ ಇಂಗ್ಲಿಷ್ ಹೈಸ್ಕೂಲ್ ನಲ್ಲಿ ಕಲಿಕಾ ಚೇತರಿಕೆ ತರಬೇತಿಯ ಎರಡನೇ ಹಂತದ ಎರಡು ದಿನಗಳ ತರಬೇತಿಯು ಆರಂಭವಾಯಿತು
ತರಬೇತಿಯನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವ ಯಾಧಿಕಾರಿಗಳಾದ ಎಮ್ ಎಸ್ ಮೇದಾರ ರವರು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟನೆ ಮಾಡಿ ಮಾತ ನಾಡಿ ಕಲಿಕಾ ಚೇತರಿಕೆ ಕಾರ್ಯಕ್ರಮದ ಉದ್ದೇಶ ವಿವರಿಸಿ ದರು.

ಕೋವಿಡ್ ಹಾಗೂ ಲಾಕ್ ಡೌನ್ ನಿಂದಾಗಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀರಾ ಹಿಂದುಳಿದಿರುವರು ಅವರಲ್ಲಿ ಕಲಿಕೆ ಯನ್ನು ವೃದ್ಧಿಸುವ ಸಲುವಾಗಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ಸರಕಾರಿ ಶಾಲಾ ಶಾಲಾ ವಿದ್ಯಾರ್ಥಿಗಳಿಗೆ ಇಡೀ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ ಎಮ್ ಮೇದಾರ ವಿವರಿಸಿದರುಕಾರ್ಯಕ್ರಮ ದಲ್ಲಿ ತಾಲೂಕಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜ ಸುಣಗಾರ ರವರು ಮಾತನಾಡಿ ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಸರಕಾರ ಹಾಗೂ ಶಿಕ್ಷಣ ಇಲಾಖೆ ರೂಪಿಸಿದ ಮಹತ್ವದ ಈ ಕಲಿಕಾ ಚೇತರಿಕೆಯ ಕಾರ್ಯಕ್ರಮವನ್ನು ಶಿಕ್ಷಕರು ಯಶಸ್ಸು ಮಾಡುವರೆಂದರು ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿ ಶ್ರೀಮತಿ ಶೈಲಾ ಕಡೆಮನಿ ಯವರು ಮಾತನಾಡಿ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು

ವೇದಿಕೆ ಯಲ್ಲಿ ತಾಲೂಕಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಹಾದೇವ ಎಸ್ ಅಥಣಿ, ಕೋಶಧ್ಯಕ್ಷರಾದ ಬಿ ವಾಯ್ ಮಡಿವಾಳರ,ತರಬೇತಿ ನೋಡಲ್ ಅಧಿಕಾರಿ ಶ್ರೀಮತಿ ಗೀತಾ ಮಡಿವಾಳರ,ಬಿ ಆರ್ ಪಿ ಸುನಿಲ ಕುಟ್ರೆ,ಶ್ರೀಮತಿ ತಳವಾರ,ತಾಲೂಕಿನ ಬಿ ಆರ್ ಪಿ, ಸಿ ಆರ್ ಪಿ, ಯವರು ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು ತಾಲೂಕಿನ ಸುಮಾರು 300ಕ್ಕಿಂತಲೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು,ಶಿಕ್ಷಕರು ತರಬೇತಿ ಯಲ್ಲಿ ಭಾಗವಹಿಸಿರುವರು ತರಬೇತಿ ಕೇಂದ್ರಕ್ಕೆ ಭೇಟಿ ಇಂದು ನಡೆದ ತರಬೇತಿ ಕೇಂದ್ರಕ್ಕೆ ಸಿ ಟಿ ಇ ಕಾಲೇಜು ಪ್ರಾಚಾರ್ಯರಾದ ರಾಜೀವ ನಾಯಕ, ಡಿ ಡಿ ಪಿ ಐ ರವರಾದ ಬಸವರಾಜ ನಾಲವತವಾಡ, ಕ್ಷೇತ್ರ ಶಿಕ್ಷಣಾ ಧಿಕಾರಿ ಗಳಾದ ಆರ್ ಪಿ ಜುಟ್ಟನವರ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ತರಬೇತಿ ವಿಕ್ಷಣೆ ಮಾಡಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....