LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಕೊನೆಯ ಪಂದ್ಯ ಗೆದ್ದ ಟೀಮ್ ಇಂಡಿಯಾ – ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದ್ದ ಪಿಂಚ್ ಗೆ ನಿರಾಸೆ

ಕ್ಯಾನ್‌ಬೆರ್ರಾ -

ಆಸ್ಪ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಕೊನೆಯ ಏಕದಿನ ಪಂಧ್ಯದಲ್ಲಿ ಗೆಲುವು ಸಾಧಿಸಿದೆ. ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸರಣಿ ವೈಟ್‌ ವಾಶ್‌ ಸೋಲಿನಿಂದ ಪಾರಾಯಿತು. ಆಸ್ಟ್ರೇಲಿಯಾದ ಕ್ಯಾನಬೆರ್ರಾ ನಲ್ಲಿ ನಡೆದ ಕೊನೆಯ ಪಂಧ್ಯದಲ್ಲಿ ಕೊನೆಗೂ ವಿರಾಟ್ ಕೋಹ್ಲಿ ಅಂತಿಮ ಪಂದ್ಯವನ್ನು ಗೆದ್ದು ನಿಟ್ಟಿಸಿರು ಬಿಟ್ಟರು.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ನಾಯಕ ವಿರಾಟ್‌ ಕೊಹ್ಲಿ ಮತ್ತು ಆಲ್ ರೌಂಡರುಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜ ದಾಖಲೆಯ ಜೊತೆಯಾಟದ ನೆರವಿನಿಂದ ಭಾರತ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 302 ರನ್ ಗಳಿಸಿತು.ನಂತರ ಈ ಒಂದು ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ಟಿ.ನಟರಾಜನ್ ಎರಡು, ಶಾರ್ದೂಲ್‌ ಠಾಕೂರ್‌ ಮೂರು ಮತ್ತು ಬುಮ್ರಾ ಅವರ ಎರಡು ವಿಕೆಟ್ ನೆರವಿನಿಂದ ಟೀಂ ಇಂಡಿಯಾ ಆಸೀಸ್‌ ಅನ್ನು 13 ರನ್ನುಗಳಿಂದ ಪರಾಭವಗೊಳಿಸಿತು.

ಟೀಂ ಇಂಡಿಯಾ ನೀಡಿದ ಸವಾಲಿಗೆ ಉತ್ತರವಾಗಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಆಡುವವರೆಗೂ ನಿಶ್ಚಿಂತೆಯಿಂದಿತ್ತು. ಈ ವಿಕೆಟ್ ಪತನವಾದ ಕೂಡಲೇ ಪ್ರವಾಸಿಗರಿಗೆ ವೈಟ್‌ ವಾಶ್ ಸೋಲುಣಿಸುವ ಅವಕಾಶದಿಂದ ವಂಚಿತವಾಯಿತು.

ನಾಯಕ ಆರನ್‌ ಫಿಂಚ್‌ (75) ಅವರ ಅರ್ಧಶತಕ ಹೊರತುಪಡಿಸಿ, ಇತರ ಆಟಗಾರರಿಂದಲೂ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ಹೊಮ್ಮಲಿಲ್ಲ. ಮೊಯ್ಸಸ್‌ ಹೆನ್ರಿಕ್ಸ್ ಹಾಗೂ ಕ್ಯಾಮರೂನ್ ಗ್ರೀನ್ 20 ರನ್ ಗಳಿಸಿ, ಔಟಾದರು. ಕಳೆದ ಎರಡು ಪಂದ್ಯಗಳ ಶತಕವೀರ ಸ್ಟೀವನ್‌ ಸ್ಮಿತ್‌ರನ್ನು ಈ ಬಾರಿ ಅಬ್ಬರಿಸಲು ಭಾರತ ಬಿಡಲಿಲ್ಲ. 7 ರನ್‌ ಗಳಿಸುವಷ್ಟರಲ್ಲಿ ಶಾರ್ದೂಲ್‌ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು.ಅಂತಿಮವಾಗಿ 49 ಓವರ್ ನಲ್ಲಿ ಆಸ್ಟ್ರೇಲಿಯಾ ತಂಡ ಎಲ್ಲಾ ವಿಕೇಟ್ ಗಳನ್ನು ಕಳೆದುಕೊಂಡು ಗೆಲ್ಲುವ ಕನಸನ್ನು ಬಿಟ್ಟಿತು. ಇತ್ತ ನಾಯಕ ಮೂರು ಪಂಧ್ಯಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡುವ ಆಸೆ ಈಡೇರಲಿಲ್ಲ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....