LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಇಂಗ್ಲೆಂಡ್ ವಿರುದ್ಧ T 20 ಸರಣಿ ಗೆದ್ದ ಟೀಮ್ ಇಂಡಿಯಾ

ಅಹಮದಾಬಾದ್ -

ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರ ಅರ್ಧ ಶತಕಗಳು, ಭುವನೇಶ್ವರ ಕುಮಾರ್ ನೇತೃತ್ವ ದಲ್ಲಿ ಬೌಲರ್ ಗಳ ಕರಾರುವಾಕ್ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಐದನೇ ಹಾಗೂ ಅಂತಿ ಮ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 36 ರನ್ ಗಳ ಅಂತರದಿಂದ ಜಯ ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿದೆ.

ಶನಿವಾರ ಟಾಸ್ ಸೋತು ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಡೇವಿಡ್ ಮಲಾನ್(68, 46 ಎಸೆತ)ಹಾಗೂ ಜೋಸ್ ಬಟ್ಲರ್ (52, 32 ಎಸೆತ)ಅರ್ಧಶತಕಗಳ ಕೊಡುಗೆಯ ಹೊರತಾಗಿಯೂ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಭಾರತದ ಪರ ಹಿರಿಯ ವೇಗದ ಬೌಲರ್ ಭುವನೇಶ್ವರ(2-15), ಶಾರ್ದೂಲ್ ಠಾಕೂರ್ (3-45)ಐದು ವಿಕೆಟ್ ಗಳನ್ನು ಹಂಚಿಕೊಂಡರು. ಹಾರ್ದಿಕ್ ಪಾಂಡ್ಯ(1-34) ಹಾಗೂ ಟಿ.ನಟರಾಜನ್ (1-39)ತಲಾ ಒಂದು ವಿಕೆಟ್ ಪಡೆದರು.

ವಿರಾಟ್ ಕೊಹ್ಲಿ, ರೋಹಿತ್ ಅಬ್ಬರದ ಆಟ

ಇದಕ್ಕೂ ಮೊದಲು ನಾಯಕನ ಆಟವಾಡಿದ ಕೊಹ್ಲಿ(ಔಟಾಗದೆ 80, 52 ಎಸೆತ, 7 ಬೌಂಡರಿ, 2 ಸಿಕ್ಸರ್)ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (ಔಟಾಗದೆ 39, 17 ಎಸೆತ, 4 ಬೌಂಡರಿ, 2 ಸಿಕ್ಸರ್) ಭಾರತವು ಇಂಗ್ಲೆಂಡ್ ಗೆ ಕಠಿಣ ಗುರಿ ನೀಡಲು ನೆರವಾದರು.

ಇನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಕೊಹ್ಲಿ ಮೊದಲ 9 ಓವರ್ ಗಳಲ್ಲಿ 94 ರನ್ ಜೊತೆಯಾಟ ನಡೆಸಿ ಭದ್ರ ಬುನಾದಿ ಹಾಕಿಕೊಟ್ಟರು. ರೋಹಿತ್ (64, 34 ಎಸೆತ, 4 ಬೌಂಡರಿ, 5 ಸಿಕ್ಸರ್) ನಿರ್ಗಮನದ ಬಳಿಕ ಸೂರ್ಯ ಕುಮಾರ್ ಯಾದವ್ (32, 17 ಎಸೆತ) ಹಾಗೂ ಕೊಹ್ಲಿ 2ನೇ ವಿಕೆಟ್ ಗೆ 49 ರನ್ ಸೇರಿಸಿದರು.

ಯಾದವ್ ಔಟಾದ ಬಳಿಕ ಕೊಹ್ಲಿಗೆ ಹಾರ್ದಿಕ್ ಪಾಂಡ್ಯ ಸಾಥ್ ನೀಡಿದರು. ಈ ಜೋಡಿ ಮೂರನೇ ವಿಕೆಟ್ ಗೆ ಮುರಿಯದ ಜೊತೆಯಾಟದಲ್ಲಿ 81 ರನ್ (40 ಎಸೆತ) ಸೇರಿಸಿ ಭಾರತದ ಸ್ಕೋರನ್ನು 200ರ ಗಡಿ ದಾಟಿಸಿತು ಇನ್ನೂ ಅಂತಿಮವಾಗಿ ಭಾರತ ಗೆಲುವು ಸಾಧಿಸಿತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...