LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿರಿಯರ ಕಿವಿ ಮಾತುಗಳ ಬಗ್ಗೆ ನಿಮಗೇಷ್ಟು ಗೋತ್ತು

ಬೆಂಗಳೂರು -

ಸಾಮಾನ್ಯವಾಗಿ ನಾವು ಎಲ್ಲಿಗಾದರೂ ಹೊರಟರೇ ಎಲ್ಲಿಗೆ . ಹೋಗುವಾಗ ಎದುರಿಗೆ ಬೆಕ್ಕು ಬಂದರೆ ಅಪಶಕುನ ,ಸಂಜೆ ಸಮಯದಲ್ಲಿ ಯಾರಾದರೂ ಮನೆಗೆ ಉಪ್ಪು ಕೇಳಲು ಬಂದರೆ ಕೊಡಬೇಡಿ , ಮಲಗಿಕೊಂಡವರನ್ನು ದಾಟಬೇಡ ಹೀಗೆ ಹಿರಿಯರ ಅನುಭವದ ಕಿವಿ ಮಾತುಗಳು ನಮ್ಮೊಂದಿಗೆ ಬೆಳೆದುಕೊಂಡು ಬಂದಿವೆ.ಯಾತಕ್ಕಾಗಿ ಹೀಗೆ ಮಾತುಗಳಿವೆ ಯಾಕೇ ಹೀಗೆ ಎಂಬ ಬಗ್ಗೆ ನಮ್ಮ ಹಿರಿಯರಿಗೆ ಗೋತ್ತು. ಕಿವಿಗಳಿಂದ ಕಿವಿಗಳಿಗೆ ಕೇಳುತ್ತಾ ರೂಢಿಯಲ್ಲಿರುವ ಒಂದಿಷ್ಟು ಕಿವಿ ಮಾತುಗಳು ಸುದ್ದಿ ಸಂತೆ ವೆಬ್ ನ್ಯೂಸ್ ನಲ್ಲಿ ನಿಮ್ಮ ಮುಂದೆ.ಸುದ್ದಿಗಳೊಂದಿಗೆ ಒಂದಿಷ್ಟು ಕಿವಿ ಮಾತುಗಳನ್ನು ಆಲಿಸುತ್ತಾ ನಮ್ಮ ಜೀವನದಲ್ಲಿ ಸಳವಡಿಕೊಂಡರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ.

ಹಿರಿಯರ ಅನುಭವದ ಕಿವಿ ಮಾತುಗಳು….
ನಾನೂ ಕೇಳಿದ್ದೇನೆ, ನೀವೂ ಕೇಳಿರಬಹುದು
ಸೋಮವಾರ ತಲೆಗೆ ಎಣ್ಣೆ ಹಚ್ಚಬೇಡ.
ಒಂಟಿ ಕಾಲಲ್ಲಿ ನಿಲ್ಲಬೇಡ.
ಮಂಗಳವಾರ ತವರಿಂದ ಮಗಳು ಗಂಡನ ಮನೆಗೆ ಹೋಗುವುದು ಬೇಡ.
ಶುಕ್ರವಾರ ಸೊಸೆಯನ್ನು ತವರಿಗೆ ಕಳಿಸುವುದು ಬೇಡ.
ಇಡೀ ಕುಂಬಳಕಾಯಿ ಮನೆಗೆ ತರಬೇಡ.
ಮನೆಯಲ್ಲಿ ಉಗುರು ಕತ್ತರಿಸಬೇಡ.
ಮಧ್ಯಾಹ್ನ ತುಳಸಿ ಕೊಯ್ಯಬೇಡ.
ಹೊತ್ತು ಮುಳುಗಿದ ಮೇಲೆ ಕಸ ಗುಡಿಸಬೇಡ / ತಲೆ ಬಾಚ ಬೇಡ .
ಉಪ್ಪು ಮೊಸರು ಸಾಲ ಕೊಡುವುದು ಬೇಡ.
ಬಿಸಿ ಅನ್ನಕ್ಕೆ ಮೊಸರು ಹಾಕಬೇಡ.
ಊಟ ಮಾಡುವಾಗ ಮದ್ಯೆ ಮೇಲೆ ಏಳಬೇಡ.
ತಲೆ ಕೂದಲು ಒಲೆಗೆ ಹಾಕಬೇಡ.
ಹೊಸಿಲನ್ನು ತುಳಿದು ದಾಟಬೇಡ.
ಮನೆಯಿಂದಹೊರಡುವಾಗ ಕಸ ಗುಡಿಸುವುದು ಬೇಡ.

ಗೋಡೆ ಮೇಲೆ ಕಾಲಿಟ್ಟು ಮಲಗಬೇಡ.
ರಾತ್ರಿ ಹೊತ್ತಲ್ಲಿ ಬಟ್ಟೆ ಒಗೆಯಬೇಡ.
ಒಡೆದ ಬಳೆ ಧರಿಸಬೇಡ.
ಮಲಗಿದ್ದ ಚಾಪೆ ಮಡಿಸದೆ ಬಿಡಬೇಡ.
ಉಗುರು ಕಚ್ಚಲು ಬೇಡ.
ಅಣ್ಣ,ತಮ್ಮ - ತಂದೆ,ಮಗ ಒಟ್ಟಿಗೆ ಒಂದೇ ದಿನ ಚೌರ ಮಾಡಿಸಬಾರದು.
ಒಂಟಿ ಬಾಳೆಲೆ ತರಬೇಡ.
ಊಟ ಮಾಡಿದ ಮೇಲೆ ಕೈ ಒಣಗಿಸಬೇಡ.
ಮುಸಂಜೆ ಹೊತ್ತಲ್ಲಿ ಮಲಗಬೇಡ.
ಕಾಲು ತೊಳೆಯುವಾಗ ಹಿಮ್ಮಡಿ ತೊಳೆಯುವುದು ಮರೆಯಬೇಡ.
ಹೊಸ್ತಿಲ ಮೇಲೆ ಕೂರಬೇಡ.
ತಿಂದ ತಕ್ಷಣ ಮಲಗಬೇಡ.ಹಿರಿಯರ ಮುಂದೆ ಕಾಲು ಚಾಚಿ / ಕಾಲ ಮೇಲೆ ಕಾಲು ಹಾಕಿ ಕೂರಬೇಡ.

ಕೈ ತೊಳೆದು ನೀರನ್ನು ಜಾಡಿಸಬೇಡಿ.
ರಾತ್ರಿ ಊಟದ ತಟ್ಟೆ ತೊಳೆಯದೇ ಬಿಡಬೇಡ.ಎಂಜಲ ಕೈಯಲ್ಲಿ ಊಟ ಬಡಿಸಬೇಡ.
ಅನ್ನ,ಸಾರು,ಪಲ್ಯ ಮಾಡಿದ ಪಾತ್ರೆಗಳು, ಅದನ್ನು ಬಿಸಿ ಮಾಡಿದ ಪಾತ್ರೆಗಳಲ್ಲಿ ತಿನ್ನಬೇಡ.ಪಾತ್ರೆಗಳ ಮೇಲೆ ಎಂಜಲು ಕೈ ತೊಳಿಯಬೇಡ
ಮನೆಗೆ ಬಂದ ಹೆಣ್ಣುಮಕ್ಕಳಿಗೆ, ಮುತ್ತೈದೆಯರಿಗೆ ಅರಿಶಿನ ಕುಂಕುಮ ಕೊಟ್ಟು ಕಳುಹಿಸುವುದನ್ನು ಅಭ್ಯಾಸ ಮಾಡಿಕೊಳ್ಳಿರಿ.
ಹರಿದ ತೂತಾದ ಒಳ ಉಡುಪು,ಬನಿಯನ್, ಅಂಗಿ,ಪ್ಯಾಂಟು, ಚಪ್ಪಲಿ,ಶೂ,ಸಾಕ್ಸ್ ಧರಿಸಬೇಡಿ.

ನಿಮಗೆ ಎಷ್ಟು ಹಣವಿದ್ದರೂ ಸಾಕಾಗುವುದಿಲ್ಲ..ಅನಾವಶ್ಯಕವಾಗಿ ಹಣ ಖರ್ಚಾಗುತ್ತದೆ.
ಮನೆಯ ಒಳಗೆ ಚಪ್ಪಲಿ,ಶೂ ತರಬೇಡಿ.
ಹೊರಗೆ ಇಡಿರಿ.ಅದು ಹೋದರೂ ನಿಮ್ಮ ಕರ್ಮ ಕಳೆಯುತ್ತದೆ.ದೇವಾಲಯ,ಮಠ, ಮಂದಿರಗಳಿಗೆ ಹೋದಾಗ ಅಕಸ್ಮಾತ್ ಚಪ್ಪಲಿ ಕಳೆದರೆ/ಬದಲಾದರೆ ನಿಮ್ಮ ಕರ್ಮ ಕಳೆಯಿತು ಎಂದು ತಿಳಿಯಿರಿ. ಬೇರೆಯವರದು ಹಾಕಿ ಕೊಂಡು ಬಂದರೆ ನೀವೇ ಬೀದಿಯಲ್ಲಿ ಹೋಗುವ ಮಾರಿಯನ್ನು ಮನೆಗೆ ಕರೆತಂದಂತೆ…!
ಹಸು ಕರುಗಳಿಗೆ ಪ್ರಾಣಿಗಳಿಗೆ ಹಳಸಿದ್ದು ಹಾಕಬೇಡಿ.
ಹಸುಗಳಿಗೆ,ಪಶುಗಳಿಗೆ ಪಾತ್ರೆ ತೊಳೆದ ನೀರು, ಮುಸುರೆ ಹಾಕಬೇಡಿ.
ಒಬ್ಬರು ಹಾಕಿಕೊಂಡ ಒಡವೆ,ಬಟ್ಟೆ ಇನ್ನೊಬ್ಬರು ಬಳಸಬೇಡಿ.
ಪ್ರಯಾಣದಲ್ಲಿ ಅಪರಿಚಿತರಿಂದ ತಿಂಡಿ, ತಿನಿಸು,ಪಾನೀಯ ಸೇವಿಸಬೇಡಿ.
ಹಾಲು - ಮೊಸರು , ಹಾಲು - ಅಡಿಗೆ ಎಣ್ಣೆ ಒಟ್ಟಿಗೆ ತರಬೇಡಿ
ಶನಿವಾರ ಉಪ್ಪು,ಎಣ್ಣೆ ತರಬೇಡಿ.
ಅನಾವಶ್ಯಕವಾಗಿ ಹೆಚ್ಚು ಚಪ್ಪಲಿಗಳನ್ನು ಖರೀದಿಸಬೇಡಿ.
ಮನೆಯಲ್ಲಿ ನಿಂತಿರುವ ಗೋಡೆ ಗಡಿಯಾರ,ಕೈ ಗಡಿಯಾರ, ಹೊಲಿಗೆ ಯಂತ್ರ, ಸೈಕಲ್,ಸ್ಕೂಟರ್ ಕೂಡಲೇ ದುರಸ್ತಿ ಮಾಡಿ .ಇಲ್ಲವೇ ವಿಲೇವಾರಿ ಮಾಡಿ.
ಭಗವಂತನಲ್ಲಿ ಏನೂ ಬೇಡಬೇಡಿ,ಬೇಡಿ ಬಿಕ್ಷುಕರಾಗ ಬೇಡಿ, ನಿಮಗೆ ಬೇಕಾದಾಗ ಸಿಕ್ಕೇ ಸಿಗುತ್ತದೆ.
ಅರ್ಹರಿಗೆ ದಾನ ಮಾಡಿ,ನಿಮ್ಮ ದಾನ ಗುಪ್ತವಾಗಿ ಇರಲಿ.

ಮಠ ಮಂದಿರಗಳ ಸ್ವತ್ತು,ಹಣಕಾಸು,ಒಡವೆ ವಿಷವೆಂದು ತಿಳಿಯಿರಿ.
ಅದನ್ನು ದುರುಪಯೋಗ ಮಾಡಿದರೆ ಶಿಕ್ಷೆ ನಿಮ್ಮ ಬೆನ್ನ ಹಿಂದೆ ಇರುವ ನೆರಳಿನಂತೆ ತಿಳಿಯಿರಿ..
ಯಾರನ್ನೂ ಅಡಿಕೊಳ್ಳಬೇಡಿ,ನಿಮ್ಮನ್ನು ಹೊಗಳಿಕೊಳ್ಳಬೇಡಿ.
ನೀವು,ನಿಮ್ಮ ಅಧಿಕಾರ ಶಾಶ್ವತವಲ್ಲ ಬೇರೆಯವರನ್ನು ಬೆಳೆಯಲು ಬಿಡಿ,ಅವರಿಗೆ ಗುರುವಾಗಿ.
ಮೇಲಿನ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ಬದಲಾವಣೆ ಕಾಣಿರಿ.ನಿಮ್ಮ ಮನೆಯೇ ಸ್ವರ್ಗವಾಗುತ್ತದೆ.ಸುದ್ದಿಯೊಂದಿಗೆ ಹಿರಿಯರ ಒಂದಿಷ್ಟು ಕಿವಿ ಮಾತುಗಳು ನಿಮಗಾಗಿ ಒಳ್ಳೆಯದಾಗಲಿ ಸದಾಕಾಲವೂ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....