ಶಿವಮೊಗ್ಗ -
ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತವೊಂದು ಸಂಭವಿ ಸಿದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿ ಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ, ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಅವರು ಅದೃಷ್ಟವಶಾತ್ ಪ್ರಾಣಾಪಾ ಯದಿಂದ ಪಾರಾಗಿದ್ದಾರೆ.
ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರಸಂಘದ ಅಧ್ಯಕ್ಷ ಮಾಲತೇಶಪ್ಪ ಅವರು ತಮ್ಮ ಕಾರಿನಲ್ಲಿ ಎಂದಿ ನಂತೆ ಶಾಲೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಲ್ವೆ ಬಳಿ ಇವರ ಬ್ರೆಝಾ ಕಾರು ಹಾಗೂ ಎದುರಿನಿಂದ ಬಂದ ಸ್ವಿಫ್ಟ್ ಕಾರಿನ ನಡುವೆ ಪ್ರಬಲ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳ ಮುಂಭಾಗ ಸಂಪೂರ್ಣ ವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಎರಡೂ ಕಾರುಗಳ ಏರ್ ಬ್ಯಾಗ್ಗಳು ತಕ್ಷಣವೇ ತೆರೆದುಕೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಏರ್ಬ್ಯಾಗ್ ಕಾರ್ಯಾಚರ ಣೆಯಿಂದಾಗಿ ಮಾಲತೇಶಪ್ಪ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿ ದ್ದಾರೆಮತ್ತೊಂದು ಕಾರಿನಲ್ಲಿದ್ದ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಮಾಡಿದರು
ಅಪಘಾತವನ್ನು ಕುರಿತು ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ತನಿಖೆ ಮಾಡ್ತಾ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ .....