LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿಸಿದ 7ನೇ ವೇತನ ಆಯೋಗ ಜಾರಿಗೆ - ಶೀಘ್ರದಲ್ಲೇ ಜಾರಿಯಾಗಲಿದೆ ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗ.....

ಬೆಳಗಾವಿ -

ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿಸಿದ 7ನೇ ವೇತನ ಆಯೋಗ ಜಾರಿಗೆ - ಶೀಘ್ರದಲ್ಲೇ ಜಾರಿ ಯಾಗಲಿದೆ ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗ ಹೌದು

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ 7ನೇ ವೇತನ ಜಾರಿಗೆ ಆಗ್ರಹ ಕಂಡು ಬಂದಿತು. ಈ ಒಂದು ವಿಚಾರ ಕುರಿತಂತೆ ಪ್ರತಿಪಕ್ಷಗಳು ಕೂಡಲೇ ರಾಜ್ಯದ ಸರ್ಕಾರಿ ನೌಕರ ರಿಗೆ ಜಾರಿಗೆ ತರಬೇಕೆಂದು ಪಟ್ಟು ಹಿಡಿದಿದ್ದು ಕಂಡು ಬಂದಿತು.

ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಪಕ್ಷಗಳ ಪಟ್ಟು ಹಿಡಿದಿದ್ದು ಇತ್ತ ಭರವಸೆ ಹಿನ್ನೆಲೆಯಲ್ಲಿ ಕೂಡಲೇ ವಿರೋಧ ಪಕ್ಷದವರು ತಮ್ಮ ಧರಣಿಯನ್ನು ಹಿಂಪಡೆದಿದ್ದು ಕಂಡು ಬಂದಿತು ಸಧ್ಯ ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು.

7 ಲಕ್ಷ ಜನ ಮಾಡುವ ಕೆಲಸವನ್ನು ಈಗ 4 ಲಕ್ಷ ನೌಕರರು ಮಾಡುತ್ತಿದ್ದಾರೆ.ಈ ಕುರಿತು ಮುಖ್ಯ ಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇ ಕೆಂದು ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ಸದಸ್ಯರು ಧರಣಿ ಕೈಗೊಂಡರು.

ಸರ್ಕಾರ ಭರವಸೆ ನೀಡಿದ್ದರಿಂದ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಸೂಚನೆ ಮೇರೆಗೆ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಕೈಗೊಂಡಿದ್ದ ಧರಣಿಯನ್ನು ಕೈಬಿಟ್ಟರು.ಮತ್ತೊಂದೆಡೆ ಸಚಿವ ಜಮೀರ್ ಅಹಮದ್ ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆ ಪ್ರಸ್ತಾಪವನ್ನು ಸದನದಲ್ಲಿ ಚರ್ಚೆಯ ಬದಲು ಸಭಾಪತಿಗಳ ಕೊಠಡಿಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಯಿತು.

ಇನ್ನೂ ಇತ್ತ ಈ ಒಂದು ವಿಚಾರ ಕುರಿತಂತೆ ಸಿಎಂ ಉತ್ತರಕ್ಕೆ ಪಟ್ಟು ಹಿಡಿಯಲಾಯಿತು. ಪ್ರತಿಪಕ್ಷಗಳ ಧರಣಿಯಿಂದ ಮುಂದೂಡಿಕೆಯಾಗಿದ್ದ ವಿಧಾನ ಪರಿಷತ್ ಸದನ ಪುನಾರಂಭ ಆಗುತ್ತಿದ್ದಂತೆ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಮಾತನಾಡಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ನಮ್ಮ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದೇವೆ ಎನ್ನುವ ಆರೋಪ ಮಾಡಿದ್ದು ಆದರೆ ನಾವು ಬ್ಲಾಕ್ ಮೇಲ್ ಮಾಡುತ್ತಿಲ್ಲ.

ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ.7 ಲಕ್ಷ ಜನ ಮಾಡಬೇಕಾ ದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಿ ದ್ದಾರೆ. ಹಾಗಾಗಿ ಈ ಕುರಿತು ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....