LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯ ಶಿಕ್ಷಕಿ,ದೈಹಿಕ ಶಿಕ್ಷಕ ಅಮಾನತು - ಇಬ್ಬರನ್ನು ಅಮಾನತು ಮಾಡಿದ CEO.....

ದಾವಣಗೆರೆ -

ಮುಖ್ಯ ಶಿಕ್ಷಕಿ,ದೈಹಿಕ ಶಿಕ್ಷಕ ಅಮಾನತು - ಇಬ್ಬರನ್ನು ಅಮಾನತು ಮಾಡಿದ CEO.....ಹೌದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹ ಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ ಇದಕ್ಕೆ ಸಹಕರಿಸಿದ ದೈಹಿಕ ಶಿಕ್ಷಕ ಮಂಜುನಾಥ ಇವರನ್ನು ಅಮಾನತು ಮಾಡಲಾಗಿದೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಅಮಾನತು ಆದೇಶ ಮಾಡಿದ್ದಾರೆ.ಶಾಲಾ ಮಕ್ಕಳಿಗೆ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದ ಎಲ್ಲಾ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂದು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡ ಲಾಗುತ್ತದೆ. ವಿತರಣೆ ಮಾಡಿದ ಬಗ್ಗೆ ಆಯಾ ದಿನದಂದು ಎಸ್‍ಎಟಿಎಸ್ ತಂತ್ರಾಂಶದಲ್ಲಿ ದಾಖಲು ಮಾಡಲಾ ಗುತ್ತದೆ

ನವೆಂಬರ್ 13 ರಂದು ಶಾಲೆಯಲ್ಲಿ ಭೌತಿಕವಾಗಿ 87 ಮಕ್ಕಳಿದ್ದು ಇದರಲ್ಲಿ 79 ಮೊಕ್ಕಳಿಗೆ ಮೊಟ್ಟೆ ವಿತರಣೆ ಮಾಡಿ ಉಳಿದ 8 ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗಿರುತ್ತದೆ. ಆದರೆ ಎಸ್‍ಎಟಿಎಸ್ ತಂತ್ರಾಂಶ ದಲ್ಲಿ 104 ಮಕ್ಕಳಿರುತ್ತಾರೆ ಎಂದು ದಾಖಲು ಮಾಡಿರು ವುದು ಕಂಡು ಬಂದಿದ್ದು ಮೊಟ್ಟೆ ವಿತರಣೆಯಲ್ಲಿ ಲೋಪವಾಗಿರುತ್ತದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶಾಲೆಗೆ ಭೇಟಿ ನೀಡಿದಾಗ ಕಂಡುಬಂದಿದೆ

ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ ಮೇರೆಗೆ ಅಮಾನತು ಮಾಡಿ ಆದೇಶ ವನ್ನು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....