LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸಾರಿಗೆ ನೌಕರರ ವೇತನಕ್ಕೇ ಮುಖ್ಯಮಂತ್ರಿ ಭೇಟಿಯಾದ ಅಧ್ಯಕ್ಷರು ಸಚಿವರು

ಬೆಂಗಳೂರು –

ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕರ ನೌಕರರ ಮತ್ತು ಸಿಬ್ಬಂದ್ದಿಗಳ ವೇತನ ವಿಚಾರ ಕುರಿತಂತೆ ಸಂಸ್ಥೆಯ ಅಧ್ಯಕ್ಷ ಎಸ್ ವಿ ಪಾಟೀಲ ಮುಖ್ಯಮಂತ್ರಿ ಭೇಟಿಯಾದ್ರು. ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೇ ಸಾರಿಗೆ ಸಂಸ್ಥೆಯ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ತೆರಳಿ ಮಾತುಕತೆ ನಡೆಸಿದ್ರು. ಮೊದಲು ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪಗೆ ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷರು ಸಾರಿಗೆ ಸಚಿವರು ಕೃಷಿ ಸಚಿವರು ಹೇಳಿದರು.

ಕಳೆದ ತಿಂಗಳು ಅದರಲ್ಲೂ ಸಧ್ಯ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರಿಗೆ ಸಂಸ್ಥೆಯ ನೌಕರರಿಗೆ ಸಂಬಳದಲ್ಲಿ ಸಮಸ್ಯೆಯಾಗುತ್ತಿದ್ದು ಅಲ್ಲದೇ ವಿಳಂಬವಾಗುತ್ತಿದೆ. ಹೀಗಾಗಿ ಈ ಒಂದು ವಿಚಾರವನ್ನು ಗಂಭೀರವಾಗಿ ತಗೆದುಕೊಂಡ ವಾಯವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ಎಸ್ ವಿ ಪಾಟೀಲ ಸಾರಿಗೆ ಸಚಿವರೊಂದಿಗೆ ಮುಖ್ಯಮಂತ್ರಿ ನಿವಾಸಕ್ಕೇ ತೆರಳಿ ವೇತನ ಕುರಿತಂತೆ ಮಾತುಕತೆ ನಡೆಸಿದ್ರು. ಎರಡು ತಿಂಗಳ ಸಂಬಳಕ್ಕಾಗಿ 634 ಕೋಟಿ ರೂಪಾಯಿ ಅವಶ್ಯಕತೆ ಇದೆ. ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಧ್ಯಕ್ಷರು ಸಚಿವರೊಂದಿಗೆ ಸಿಎಮ್ ಗೆ ಒತ್ತಾಯವನ್ನು ಮಾಡಿದ್ರು.

ಕಳೆದ ಒಂದು ವಾರದಿಂದ ಸಾರಿಗೆ ಸಂಸ್ಥೆಯಲ್ಲಿ ವೇತನ ವಿಚಾರ ಕುರಿತಂತೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಪರಿಹಾರಕ್ಕೇ ಸಂಸ್ಥೆಯ ಅಧ್ಯಕ್ಷರು ಸಾರಿಗೆ ಸಚಿವರೊಂದಿಗೆ ಮಾಡಿದ್ರು. ಇನ್ನೂ ಅಧ್ಯಕ್ಷರ ಮತ್ತು ಸಾರಿಗೆ ಸಚಿವರ ಮನವಿಗೆ ಸ್ಪಂದಿಸಿದ ನಾಡದೋರೆ ವೇತನಕ್ಕಾಗಿ ಬೇಕಾಗಿರುವ 634 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲು ಒಪ್ಪಿಗೆಯನ್ನು ನೀಡಿದ್ರು. ಇನ್ನೂ ಇದಕ್ಕೂ ಮುನ್ನ ಅಧ್ಯಕ್ಷರು ಮತ್ತು ಸಾರಿಗೆ ಸಚಿವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದರೆ ಇಷ್ಟೋತ್ತಿಗಾಗಲೇ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿ ವೇತನ ಸಾರಿಗೆ ಸಂಸ್ಥೆಯ ನೌಕರರ ಜೇಬಿಗೆ ಸೇರುತ್ತಿತ್ತು.

ಇದರಿಂದ ಹಬ್ಬವನ್ನು ಖುಷಿ ಖುಷಿಯಾಗಿ ನೌಕರರು ಮಾಡುತ್ತಿದ್ದರು. ಆದರೆ ಸಧ್ಯ ಇದ್ಯಾವುದು ಆಗದ ಹಿನ್ನಲೆಯಲ್ಲಿ ದುಬಾರಿಯಾದ ಜೀವನದ ನಡುವೆ ಕೆಲವರು ದೀಪಾವಳಿ ಮಾಡಿದ್ರೆ ಇನ್ನೂ ಕೆಲವರು ಹಬ್ಬ ಮಾಡಿಲ್ಲ.ಒಟ್ಟಾರೆ ಈಗಲಾದರೂ ವಾಯವ್ಯ ಸಾರಿಗೆ ಸಂಸ್ಥೆಯ ನೌಕರರ ವೇತನದ ವಿಚಾರವನ್ನು ಗಂಭೀರವಾಗಿ ತಗೆದುಕೊಂಡಿರುವ ಮುಖ್ಯಮಂತ್ರಿ ಭೇಟಿಯಾಗಿದ್ದು ಸಂಸ್ಥೆಯ ಅಧ್ಯಕ್ಷರ ಮತ್ತು ಸಾರಿಗೆ ಇಲಾಖೆಯ ಸಚಿವರ ಕಾರ್ಯ ಮೆಚ್ಚುವಂತದ್ದು.ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ ಸಿ ಪಾಟೀಲ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....