LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡಿದ ನ್ಯಾಯಾಲಯ - 6 ವರ್ಷಗಳ ನಂತರ ಶಿಕ್ಷೆ ಪ್ರಕಟ.....

ಬೆಂಗಳೂರು -

ಶಾಲೆಯಲ್ಲೇ ಆರು ವರ್ಷದ ಬಾಲಕಿ ಮೇಲೆ ರೇಪ್ ಮಾಡಿದ ಬೆಂಗಳೂರಿನ ಇಂದಿರಾನಗರದ ಶಿಕ್ಷಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯ ನೀಡಿದೆ ‌ಹೌದು ಘಟನೆ ನಡೆದ ನಂತರ ಬಾಲಕಿಯು ತಾಯಿಯ ಬಳಿ ಘಟನೆ ಕುರಿತಂತೆ ಜೀವನ್ ಬಿಮಾ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ ಪೋಕ್ಸೋ ಕಾಯಿದೆ ಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು 2014ರ ಅಕ್ಟೋಬರ್ 30 ರಂದು ಬಂಧಿಸಿದ್ದರು

ಶಾಲೆ ಆವರಣದಲ್ಲೇ 6 ವರ್ಷದ ಬಾಲಕಿ ಮೇಲೆ ಅತ್ಯಾ ಚಾರ ಎಸಗಿದ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ಇಂದಿರಾನಗರದ ಖಾಸಗಿ ಶಾಲೆಯೊಂದರ ಶಿಕ್ಷಕನಿಗೆ ಬೆಂಗಳೂರು ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಇಂದಿರಾನಗರದ ಖಾಸಗಿ ಶಾಲೆಯೊಂ ದರಲ್ಲಿ ಹಿಂದಿ ಬೋಧಿಸುತ್ತಿದ್ದ ಹಳೆ ತಿಪ್ಪಸಂದ್ರ ನಿವಾಸಿ ಜಯಶಂಕರ್ (46) ಎಂಬ ಶಿಕ್ಷಕನಿಗೆ ಈ ಶಿಕ್ಷೆ ವಿಧಿಸಲಾ ಗಿದೆ.ಈತನ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.2014ರ ಅಕ್ಟೋಬರ್ 28 ರಂದು ಶಾಲೆಯಿಂದ ಮನೆಗೆ ಮರಳಿದ್ದ ಬಾಲಕಿ ತನ್ನ ಖಾಸಗಿ ಭಾಗಗಳಲ್ಲಿ ನೋವಾಗುತ್ತಿರುವ ಬಗ್ಗೆ ತನ್ನ ತಾಯಿಗೆ ಹೇಳಿಕೊಂಡಿದ್ದಳು.ಮಗುವನ್ನು ಆಸ್ಪತ್ರೆಗೆ ಕರೆ ದೊಯ್ದು ತಪಾಸಣೆ ನಡೆಸಿದಾಗ ಅತ್ಯಾಚಾರ ಎಸಗಿರು ವುದು ದೃಢಪಟ್ಟಿತ್ತು.ಘಟನೆ ನಡೆದ ಮರುದಿನ ಮಗುವಿನ ತಾಯಿ ಶಾಲೆಗೆ ತೆರಳಿ,ಈ ಬಗ್ಗೆ ಶಿಕ್ಷಕರಿಂದ ವಿವರಣೆ ಕೇಳಿ ದ್ದರು.ಆದರೆ ಶಾಲಾ ಸಿಬ್ಬಂದಿ ಸೂಕ್ತವಾಗಿ ಪ್ರತಿಕ್ರಿಯಿ ಸಿರಲಿಲ್ಲ.ಬಳಿಕ ತಾಯಿ ಘಟನೆ ಕುರಿತಂತೆ ಜೀವನ್ ಬಿಮಾ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ ಪೋಕ್ಸೋ ಕಾಯಿದೆಯಡಿ ಪ್ರಕರಣ (Sec 376 of IPC relates to rape and Sections 4 and 6 of POCSO Act) ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು 2014ರ ಅಕ್ಟೋಬರ್ 30 ರಂದು ಬಂಧಿಸಿ ದ್ದರು.ವಿಚಾರಣೆ ವೇಳೆ ಆರೋಪಿ ಶಿಕ್ಷಕ (Jayashankar) ಬಾಲಕಿಯನ್ನು ಮಧ್ಯಾಹ್ನದ ಊಟದ ವೇಳೆ ಶಾಲೆಯ ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿತ್ತು.ಅಭಿಯೋಜನೆ ಪರ ಸರ್ಕಾರಿ ಅಭಿಯೋಜಕ ಕೆವಿ ಅಶ್ಚತ್ಥನಾರಾಯಣ ವಾದ ಮಂಡಿಸಿ ದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....