LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಕ್ಕೆ ಹೊಸದೊಂದು ಬೇಡಿಕೆ ಇಟ್ಟ ರಾಜ್ಯ ಸರ್ಕಾರಿ ನೌಕರರು -

ಬೆಂಗಳೂರು -

ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರು ಹೊಸ ದೊಂದು ಬೇಡಿಕೆಯನ್ನು ಇಟ್ಟಿದ್ದಾರೆ ಹೌದು ವಿವಿಧ ಕಾರಣಗಳಿಂದಾಗಿ ಸರ್ಕಾರಿ ಇಲಾಖೆಗಳ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ಸಿಗುತ್ತಿಲ್ಲ ಕೆಲವರು ತಿಂಗಳು ಗಳು, ಹಲವಾರು ವರ್ಷಗಳಿಂದ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಇದರಿಂದ ಯಾವುದೇ ತಪ್ಪಿಲ್ಲ ದಿದ್ದರೂ ಕರ್ನಾಟಕ ಸರ್ಕಾರದ ವಿಮಾ ಇಲಾಖೆಯಿಂದ (ಕೆಜಿಐಡಿ) ಸಾಲ ಪಡೆದವರು ಬಡ್ಡಿ ಪಾವತಿಸುವಂತಾ  ಗಿದೆ

ಜಿಲ್ಲಾ ಮತ್ತು ತಾಲೂಕು ಪಂಚಾಯತ್, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಕೆಲವು ಜಿಲ್ಲೆಗಳ ಕೆಲವು ಇಲಾಖೆಗಳ ಸರ್ಕಾರಿ ನೌಕರರಿಗೆ ಸೂಕ್ತ ಸಮಯಕ್ಕೆ ವೇತನ ಸಿಗುತ್ತಿಲ್ಲ ಸರ್ಕಾರದಿಂದ ಮಂಜೂರಾದ ಹುದ್ದೆಗಳು 7.7 ಲಕ್ಷವಾಗಿದ್ದು, ಅದರಲ್ಲಿ ಸುಮಾರು 5.4 ಲಕ್ಷ ಹುದ್ದೆ ಗಳನ್ನು ಭರ್ತಿ ಮಾಡಲಾಗಿದೆ.

ಸಿಬ್ಬಂದಿ ಹಾಗೂ ಹಣ ಕೊರತೆಯಿಂದಾಗಿ ಸರ್ಕಾರವು ಗುತ್ತಿಗೆ ನೌಕರರ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇವರಿಗೂ ಕೂಡ ವೇತನ ಸೂಕ್ತ ಸಮಯಕ್ಕೆ ಸಿಗುತ್ತಿಲ್ಲ. ವೇತನ ವಿಳಂಬದಿಂದಾಗಿ ನೌಕರರು ಹೆಚ್ಚುವರಿ ಬಡ್ಡಿ ಯನ್ನುಪಾವತಿಸಬೇಕಾಗಿದೆ.ರಾಜ್ಯ ಸರ್ಕಾರವು 1 ಲಕ್ಷ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡುತ್ತಿದೆ. 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ನಂತರ ವೇತನ ಮತ್ತು ಪಿಂಚಣಿ ಸೇರಿದಂತೆ ಕನಿಷ್ಠ 22,000 ಕೋಟಿ ರೂ.ಗಳಿಂದ 25,000 ಕೋಟಿ ರೂ ವೆಚ್ಚ ಮಾಡುತ್ತಿದೆ.

ಈ ವೆಚ್ಚ ನಿರ್ವಹಣೆಗೆ ಸರ್ಕಾರವು ಹೆಣಗಾಡುತ್ತಿದೆ. ವೇತನ ಪಾವತಿ ವಿಳಂಬಕ್ಕೆ ಇದು ಕೂಡ ಒಂದು ಕಾರಣವಾಗಿದೆ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮಾತನಾಡಿ, ಸರ್ಕಾರಿ ಸ್ವಾಮ್ಯ ಸಂಸ್ಥೆಯಾದ ಕೆಜಿಐಡಿ ಕಡಿಮೆ ಬಡ್ಡಿಯಲ್ಲಿ ಸರ್ಕಾರಿ ನೌಕರರಿಗೆ ಸಾಲ ನೀಡುತ್ತದೆ

ಪ್ರತಿ ತಿಂಗಳು ನಿರ್ದಿಷ್ಟ ದಿನಾಂಕದಂದು ಸಾಲದ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಆದರೆ, ಸಂಬಳ ವಿಳಂಬವಾದಾಗ ಹಲವರಿಗೆ ಸಕಾಲಕ್ಕೆ ಬಡ್ಡಿ ಕಟ್ಟಲು ಸಾಧ್ಯವಾಗುತ್ತಿಲ್ಲ. ನಾನಾ ಕಾರಣಗಳಿಂದ ವೇತನ ವಿಳಂಬವಾಗುತ್ತಿದೆ. ಆದರೆ, ತಮ್ಮ ತಪ್ಪಿಲ್ಲದಿದ್ದರೂ ಹೆಚ್ಚುವರಿ ಬಡ್ಡಿ ಕಟ್ಟುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ವಿವಿಧ ಕಾರಣಗಳಿಂದಾಗಿ ಸರ್ಕಾರಿ ಇಲಾಖೆಗಳ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಇದರಿಂದ ಹಲವು ಸಮಸ್ಯೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ನನ್ನನ್ನು ಸಂಪರ್ಕಿಸಿದ್ದಾರೆ. ಹಾಗಾಗಿ, ಬಡ್ಡಿ ವಿಧಿಸದಂತೆ ತಡೆಯಲು ತಂತ್ರಾಂಶಗಳಲ್ಲೇ ಮಾರ್ಪಾಡು ಮಾಡುವಂತೆ ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....