LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಚಿವರಿಗೆ,ಸಂಸದರಿಗೆ ಅಧಿಕಾರಿ ಗಳಿಗೆ ಭರ್ಜರಿ ಕೊಡುಗೆ ನೀಡಿದ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಘೋಷಣೆ ಯಾಗದ ವೇತನ ಆಯೋಗದ ರಚನೆ.....

ಬೆಂಗಳೂರು -

ರಾಜ್ಯದ ಸಚಿವರು,ಸಂಸದರಿಗೆ ಮತ್ತು ಅಧಿಕಾರಿ ಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಪ್ಟ್ ನೀಡಿದೆ ಹೌದು ಸರ್ಕಾರ ದಿಂದ ಸಚಿವರು,ಲೋಕಸಭಾ ಸದಸ್ಯರು ಹಾಗೂ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯ ದರ್ಶಿ ಗಳು,ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯ ಸ್ಥರು ಗಳಿಗೆ ಹೊಸ ವಾಹನ ಖರೀದಿಸೋದಕ್ಕೆ ನಿಗದಿ ಪಡಿಸಲಾ ಗಿದ್ದಂತ ಮಿತಿಯನ್ನು ಹೆಚ್ಚಳ ಮಾಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು ಸಚಿವರುಗಳಿಗೆ, ಸಂಸದ ರಿಗೆ ಹೊಸ ವಾಹನ ಖರೀದಸಲು ಆರ್ಥಿಕ ಮಿತಿಯನ್ನು ಗರಿಷ್ಠ 23 ಲಕ್ಷ ನಿಗದಿ ಪಡಿಸಲಾಗಿತ್ತು.ಈ ಮಿತಿಯನ್ನು ರೂ.23 ಲಕ್ಷದಿಂದ ರೂ.26 ಲಕ್ಷ ಗಳಿಗೆ ಹೊಸ ವಾಹನ ಖರೀದಿಸಲು ಇರುವ ಆರ್ಥಿಕ ಮಿತಿಯನ್ನು ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆ ಸಹಮತಿಸಿರುತ್ತದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಇನ್ಮುಂದೆ ಸಚಿವರು,ಲೋಕಸಭಾ ಸದಸ್ಯರುಗಳು ಉಪಯೋಗಕ್ಕಾಗಿ ವಾಹನ ಖರೀದಿಸಲು ನಿಗದಿ ಪಡಿಸಿದ ಆರ್ಥಿಕ ಮಿತಿಯನ್ನು ರೂ.23 ಲಕ್ಷಗಳಿಂದ ರೂ.26 ಲಕ್ಷ ಗಳಿಗೆ ಪರಿಷ್ಕರಿಸಿ ನಿಗದಿ ಪಡಿಸಲಾಗಿದೆ ಎಂದಿದ್ದಾರೆ.

ಇನ್ನೂ ಅಪರ ಮುಖ್ಯ ಕಾರ್ಯದರ್ಶಿಗಳು,ಪ್ರಧಾನ ಕಾರ್ಯದರ್ಶಿಗಳು,ಕಾರ್ಯದರ್ಶಿಗಳು,ಇಲಾಖಾ ಮುಖ್ಯಸ್ಥರು(ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಗಳಾಗಿ ದ್ದಲ್ಲಿ )ಇವರುಗಳಿಗೆ ರೂ.20 ಲಕ್ಷಗಳ ಮಿತಿಯೊಳಗೆ ಜಿಲ್ಲಾಧಿಕಾರಿಗಳು,ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ರಿಗಳು,ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಗಳಿಗೆ ರೂ.18 ಲಕ್ಷಗಳು

ಇತರೆ ಜಿಲ್ಲಾ ಹಂತದ ಅಧಿಕಾರಿಗಳು, ಉಪವಿಭಾಧಿಕಾ ರಿಗಳು,ಪೊಲೀಸ್ ಉಪಾಧೀಕ್ಷಕರುಗಳಿಗೆ ರೂ.12.50 ಲಕ್ಷಗಳು ಹಾಗೂ ತಹಶೀಲ್ದಾರರುಗಳು ಮತ್ತು ಇತರೆ ಅರ್ಹ ತಾಲೂಕು ಮಟ್ಟದ ಅಧಿಕಾರಿಗಳಿಗೆ ರೂ.9 ಲಕ್ಷಗಳ ಮಿತಿಯನ್ನು ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯು ಸಹಮಿತಿಸಿರುತ್ತದೆ ಎಂದು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....