LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಕಲಚೇತನ ಶಿಕ್ಷಕರು ಮನೆಯಿಂ ದಲೇ ಕೆಲಸ ಮಾಡುವುದು ಮುಂದುವರೆಯಲಿದೆ ಬೀರಪ್ಪ ಅಂಡಗಿ ಚಿಲವಾಡಗಿ.....

ಚಿತ್ರದುರ್ಗ -

ವಿಕಲಚೇತನ ಶಿಕ್ಷಕರು ಮನೆಯಿಂದಲೇ ಕೆಲಸ ಮಾಡುವ ಕುರಿತು ಈ ಹಿಂದೆ ಮಾಡಲಾಗಿದ್ದ ಆದೇಶವೇ ಮುಂದುವರೆಯಲಿದೆ ಯಾವ ವಿಕಲಚೇತನ ನೌಕರರ ಗೊಂದಲಕ್ಕೆ ಒಳಗಾಗ ಬಾರದು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.ಈ ವಿಷಯದ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರೋನಾ ಮಾಹಾಮಾರಿಯ ಹಿನ್ನೆಲೆಯಲ್ಲಿ ಸರಕಾರ ಮುಖ್ಯಕಾರ್ಯದರ್ಶಿಗಳಾದ ರವಿಕುಮಾರ ಅವರು ವಿಕಲಚೇತನ ನೌಕರರ ಸಮಸ್ಯೆಗಳನ್ನು ಅರಿತು ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವಂತೆ ಆದೇಶ ಮಾಡಿದ್ದರೂ ಅದರ ಜೊತೆಗೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಸಂಘದ ವತಿಯಿಂದ ಮನವಿ ಪತ್ರವನ್ನು ನೀಡಿ ಶಿಕ್ಷಕರು ಕೂಡಾ ಮನೆಯಿಂದಲೇ ಕೆಲಸ ಮಾಡುವ ಬಗ್ಗೆ ಈಗಾಗಲೇ ಆದೇಶ ಮಾಡಿಸ ಲಾಗಿದೆ.ಅಲ್ಲದೇ ಪ್ರಸ್ತುತ ೨೦ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.೧೧ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆದಿದೆ.ಪ್ರಸ್ತುತವಾಗಿ ಅನ್ ಲಾಕ್ ಇರುವ ಜಿಲ್ಲೆಯಲ್ಲಿ ಕೂಡಾ ಸಂಚರಿಸಲು ಬಸ್ ಗಳು ಇಲ್ಲದ ಕಾರಣ ವಿಕಲಚೇತನ ಶಿಕ್ಷಕರು ಶಾಲೆಗಳಿಗೆ ತೆರಳಲು ತೊಂದರೆಯಾಗುತ್ತದೆ.ಅಲ್ಲದೇ ಮನೆಯಿಂದಲೇ ಕೆಲಸ ನಿರ್ವಹಿಸುವ ಬಗ್ಗೆಮಾಡಿದ ಆದೇಶದಲ್ಲಿ ಮುಂದಿನ ಆದೇಶ ಬರುವವರೆಗೂ ಅಂತ್ತಾ ಇದೆ.ಆದ್ದರಿಂದ ರಾಜ್ಯ ಎಲ್ಲಾ ವಿಕಲಚೇತನ ಶಿಕ್ಷಕರು ಬಸ್ ಸಂಚಾರ ಪ್ರಾರಂಭ ಮಾಡುವ ತನಕ ಮನೆಯಿಂದಲೇ ಕೆಲಸ ಮಾಡಲು ಅವಕಾಶವಿದ್ದು, ಯಾವ ವಿಕಲಚೇತನ ಶಿಕ್ಷಕರು ಗೊಂದಲಕ್ಕೆ ಒಳಗಾರಬಾರದು ಎಂದು ಮನವಿ ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....