LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅವರು ಬಾ ಅಂತಾರೆ ಇವರು ಬೇಡ ಅಂತಾರೆ - ಗೊಂದಲದಲ್ಲಿ ಶಿಕ್ಷಕರು.....

ಬೆಂಗಳೂರು -

ಕಳೆದ ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ನವಂಬರ್ 7- 11-2021 ರಂದು ಸರ್ಕಾರಿ ನೌಕರರ ಸಂಘದ ವತಿಯಿಂದ ಮಹತ್ವದ ಸಭೆಯನ್ನು ಕರೆಯಲಾಗಿದೆ.ಷಡಾಕ್ಷರಿ ಅವರ ನೇತೃತ್ವದಲ್ಲಿ ಕರೆಯಲಾಗಿ ರುವ ಈ ಒಂದು ಸಭೆಗೆ ಈಗಾಗಲೇ ನಾಡಿನ ಬಹುತೇಕ ಶಿಕ್ಷಕರು ಬರಲು ಒಪ್ಪಿಕೊಂಡಿದ್ದಾರೆ.ಸಧ್ಯ ದೀಪಾವಳಿ ಹಬ್ಬದ ಸಂಭ್ರಮ ದಲ್ಲಿರುವ ಶಿಕ್ಷಕರು ಹಬ್ಬಗಳನ್ನು ಮುಗಿಸಿಕೊಂಡು ಬೆಂಗಳೂರಿನತ್ತ ಹೋಗಲು ಈಗಾಗಲೇ ತೀರ್ಮಾನ ತಗೆದುಕೊಂಡಿದ್ದಾರೆ.ಇವರು ಈ ಹಿಂದೆ ಹೇಳಿದಂತೆ ಅಖಾಡಕ್ಕೆ ಇಳಿದಿದ್ದು ಹೀಗಾಗಿ ಮಹತ್ವದ ಈ ಒಂದು ಸಭೆಯಲ್ಲಿ ಶಿಕ್ಷಕರು ಪಾಲ್ಗೊಂಡು ತಮ್ಮ ಸಮಸ್ಯೆ ಗಳಿಗೆ ತಾರ್ಕಿಕ ಅಂತ್ಯ ಹಾಡಲು ಕಂಡುಕೊಳ್ಳಲು ಮುಂದಾಗಿದ್ದಾರೆ

ಇದು ಒಂದು ವಿಚಾರ ವಾದರೆ ಈ ಒಂದು ಸಭೆಗೆ ಯಾವುದೇ ಕಾರಣಕ್ಕೂ ಹೋಗದಂತೆ ಶಿಕ್ಷಕರಿಗೆ ಸಂಘಟನೆ ಯೊಂದರ ನಾಯಕರು ತಾಕೀತು ಮಾಡಿದ್ದಾರಂತೆ.ಹೀಗಾಗಿ ಗೊಂದಲದಲ್ಲಿ ನಾಡಿನ ಶಿಕ್ಷಕರು ಇದ್ದಾರೆ.ನಮ್ಮ ಸಮಸ್ಯೆ ಗಳ ಕುರಿತು ಚರ್ಚೆ ಮಾಡಲು ಷಡಾಕ್ಷರಿ ಅವರೇ ಮಹತ್ವದ ಸಭೆಯನ್ನು ಕರೆದಿದ್ದಾರೆ ಹೀಗಾಗಿ ಈ ಒಂದು ಸಭೆ ತುಂಬಾ ಮಹತ್ವದ್ದಾಗಿದೆ ಹೋಗಬೇಕು ಎಂದು ಕೊಂಡಿದ್ದ ಶಿಕ್ಷಕರಿಗೆ ಸಂಘಟನೆಯ ನಾಯಕರು ಬ್ರೇಕ್ ಹಾಕಿದ್ದಾರೆ.

ಸರ್ಕಾರಿ ನೌಕರರ ಸಂಘ ಏರ್ಪಡಿಸಲಾಗಿರುವ ಈ ಒಂದು ನಿರ್ಣಾಯಕ ಮಹತ್ವದ ಸಭೆಗೆ ಬರುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನ ಗೌಡ ಪಾಟೀಲರವರಿಗೆ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅವರು ಆಹ್ವಾನ ನೀಡಿದ್ದು ಇದೆಲ್ಲದರ ನಡುವೆ ಈಗ ಶಿಕ್ಷಕರು ಗೊಂದಲದಲ್ಲಿ ಇದ್ದಾರೆ ಅವರು ಬಾ ಅಂತಾರೆ ಇವರು ಬೇಡ ಅಂತಾರೆ ಏನು ಮಾಡಬೇಕು ಎಂಬ ಗೊಂದಲದಲ್ಲಿದ್ದು ದಾರಿ ಕಾಣದಂತಾಗಿದೆ ಎಂಬ ಮಾತು ಕೇಳಿ ಬರುತ್ತಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....