LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಕ್ಕೆ ಮಾದರಿಯಾಯಿತು ಈ ಸರ್ಕಾರಿ ಶಾಲೆ - ಮಾದರಿ ಸರ್ಕಾರಿ ಶಾಲೆಯ ಹಿಂದಿನ ಶಿಕ್ಷಕರ ಪರಿಶ್ರಮ ಮೆಚ್ಚುವಂತಹದ್ದು.....

ಹಳೆಮಳಲಿ (ನ್ಯಾಮತಿ) -

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಕಾಯಕ ಎಂದು ಭಾವಿಸಿ ಶಿಕ್ಷಕರು ಕರ್ತವ್ಯ ನಿರ್ವಹಿಸಿದರೆ ಅಂತಹ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂಬುದಕ್ಕೆ ಹಳೆಮಳಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಾಕ್ಷಿ.ತುಂಗಭದ್ರಾ ನದಿ ದಡದಲ್ಲಿ 60 ಮನೆಗಳನ್ನು ಹೊಂದಿರುವ ಹೊನ್ನಾಳಿ ಶಿವಮೊಗ್ಗ ಮುಖ್ಯರಸ್ತೆಯಿಂದ 5 ಕಿ.ಮೀ ದೂರದಲ್ಲಿರುವ ಗ್ರಾಮ ಹಳೆಮಳಲಿ.ಈ ಶಾಲೆಯಲ್ಲಿ 1ರಿಂದ 5ನೇ ತರಗತಿ ಯವರೆಗೆ 30 ಮಕ್ಕಳಿದ್ದು ಎಸ್‌ಡಿಎಂಸಿ,ಪೋಷಕರ ಸಹ ಕಾರದಿಂದ ಪೂರ್ವ ಪ್ರಾಥಮಿಕ(ಎಲ್.ಕೆ.ಜಿ ಮತ್ತು ಯು.ಕೆ.ಜಿ) ವಿಭಾಗವನ್ನು 2018-19ನೇ ಸಾಲಿನಿಂದ ಆರಂಭಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ 18 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶಯದಂತೆ ನೂರ ರಷ್ಟು ದಾಖಲಾತಿ,ಹಾಜರಾತಿ ಮತ್ತು ಕಲಿಕೆಯನ್ನು ಹೊಂದಿ ರುವುದು ಶಾಲೆಯ ವಿಶೇಷ.ಪೂರ್ವ ಪ್ರಾಥಮಿಕ ಶಾಲೆ ಆರಂಭ ಆದಾಗಿನಿಂದ ಪಾಲಕರು ಮಕ್ಕಳನ್ನು ಖಾಸಗಿ ಕಾನ್ವೆಂಟ್‌ಗೆ ಕಳಿಸುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು. ಗೋಡೆ ಗಳಿಗೆ ಸಾಧನ ಪದಗಳು,ವರ್ಣಮಾಲೆ,ಅಕ್ಷರಗಳ ಚಪ್ಪರ ಇವೆ.ಮಕ್ಕಳಿಗೆ ಶಿಕ್ಷಕರು ವಾರದಲ್ಲಿ 2 ದಿನ 4 ಅವಧಿಗಳಲ್ಲಿ ಲೇಜಿಮ್,ಡಂಬಲ್ಸ್,ಹೂಪ್ಸ್,ಸರಳ ವ್ಯಾಯಾಮ ಮಾಡಿ ಸುತ್ತಾರೆ.ಪೂರ್ವ ಪ್ರಾಥಮಿಕ ಶಾಲೆಯ ಪುಟಾಣಿಗಳು ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪಟಪಟನೆ ಓದುತ್ತಾರೆ. ಉತ್ತಮ ಬರವಣಿಗೆಯೂ ಇದೆ.ಮಗ್ಗಿಗಳನ್ನು ಮೇಲಿನಿಂದ ಕೆಳಕ್ಕೆ,ಕೆಳಗಿನಿಂದ ಮೇಲೆ ಮತ್ತು ಅಡ್ಡಲಾಗಿ ಹೇಳುವ ಜಾಣ್ಮೆ ಹೊಂದಿದ್ದಾರೆ.

ಇಲ್ಲಿ ಶಾಲಾವನ,ಕೈತೋಟ,ಸುಸಜ್ಜಿತ ತರಗತಿ ಕೊಠಡಿ ಗಳು,ತಾಲ್ಲೂಕಿನಲ್ಲಿಯೇ ಮಾದರಿಯಾದ ಹೈಟೆಕ್ ಅಡುಗೆ ಕೊಠಡಿ,ಮುಖ್ಯಶಿಕ್ಷಕರ ಕೊಠಡಿ,ಶಾಲಾ ಆವರಣದಲ್ಲಿಯೇ ಅಂಗನವಾಡಿ ಕಟ್ಟಡ,ಶೌಚಾಲಯ ಇದೆ.

ಮುಖ್ಯಶಿಕ್ಷಕ ಕರಬಸಪ್ಪ ಅವರೇ ಈ ಮಾದರಿ ಶಾಲೆಯ ರೂವಾರಿ.ಇವರಿಗೆ ಸಹಶಿಕ್ಷಕಿ ಕೆ.ಬಿ.ಕವಿತಾ,ಗೌರವಧನ ಶಿಕ್ಷಕಿ ಎಚ್.ಕೆ. ರಂಜಿತಾ, ಬಿಸಿಯೂಟ ತಯಾರಕರಾದ ಪುಷ್ಪಾ, ಚಂದ್ರಕಲಾ ಮತ್ತು ಗ್ರಾಮಸ್ಥರ ಸಹಕಾರ ದೊರೆತಿದೆ.ಶಾಲೆಯ ಆವರಣದಲ್ಲಿ 6 ತೆಂಗಿನಮರಗಳು, 50 ಅಡಿಕೆ ಮರ,100 ತೇಗದ ಗಿಡ,25 ಇತರ ಜಾತಿಯ ಮರಗಳನ್ನು ಬೆಳೆಸಿರುವುದರಿಂದ ಹಸಿರು ವಾತಾವರಣ ವಿದೆ.ಕೋವಿಡ್ ಸಮಯದಲ್ಲಿಯೂ ಮಕ್ಕಳಿಗೆ ಶಿಕ್ಷಣ ನೀಡಿದ್ದೇವೆ ಎಂದು ಮುಖ್ಯಶಿಕ್ಷಕ ಕರಬಸಪ್ಪ ಹೇಳಿದರು.

ಪೋಷಕರು,ಹಳೆ ವಿದ್ಯಾರ್ಥಿಗಳು,ಗ್ರಾಮಸ್ಥರು,ದಾನಿಗಳ ಸಹಕಾರದಿಂದ ₹ 1 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್‌ ಆರಂಭಿ ಸುವ ಯೋಜನೆಯನ್ನು ಶಿಕ್ಷಕರು ರೂಪಿಸಿದ್ದು ಅದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಎಂ.ಪಿ.ಷಡಾಕ್ಷರಿ, ಉಪಾಧ್ಯಕ್ಷೆ ಮಂಜುಳಮ್ಮ ಮತ್ತು ಸದಸ್ಯರು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....