LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೊಸ ಬೊಲೆರೊ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟವರು.....

ಯಲ್ಲಾಪುರ -

ಹೊಸ ಬೊಲೆರೊ ಖರೀದಿ ಮಾಡಿ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ವಾಹನವೊಂದು ಅಪಘಾತವಾಗಿ ಇಬ್ಬರು ಸಾವಿಗೀಡಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಅರಬೈಲ್ ಘಟ್ಟದಲ್ಲಿ ನಡೆದಿದೆ. ಈ ಒಂದು ಭೀಕರ ಅಪಘಾತ ಸಂಭವಿಸಿದ್ದು ಬೊಲೆರೊ ವಾಹನಕ್ಕೆ ಎಡದಿಂದ ಒಂದು ಲಾರಿ, ಬಲದಿಂದ ಮತ್ತೊಂದು ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಲಾರಿ-ಟಿಪ್ಪರ್ ಮಧ್ಯೆ ಸಿಕ್ಕ ಹೊಸ ಬೊಲೆರೊ ನಜ್ಜುಗುಜ್ಜಾಗಿದೆ.

ಬಾಗಲಕೋಟೆಯ ಲೋಕಾಪುರದ 8 ಜನರು ಬೊಲೆರೊ ದಲ್ಲಿ ಗೋಕರ್ಣ ಮತ್ತು ಧರ್ಮಸ್ಥಳ ಕ್ಕೆಂದು ಹೋಗುತ್ತಿದ್ದರು. ಈ ಪೈಕಿ ನಾಲ್ವರು ಮಹಿಳೆಯರು ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಹೊಸ ಬೊಲೆರೊ ಖರೀದಿಸಿದ್ದ ಕುಟುಂಬ ಕಾರಿಗೆ ಪೂಜೆ ಮಾಡಿಸ ಲೆಂದು ದೇವರ ಸನ್ನಿಧಿಗೆ ಹೊರಟಿದ್ದರು.

ಧರ್ಮಸ್ಥಳಕ್ಕೆ ಹೊರಟಿದ್ದರು ಮಾರ್ಗಮಧ್ಯೆ ಭೀಕರ ಅಪಘಾತವಾಗಿದ್ದು ಕಾರಿನಲ್ಲಿದ್ದ ಭಾಗ್ಯಶ್ರೀ(35) ಮತ್ತು ಚಿಕ್ಕಮ್ಮ (28) ಮೃತಪಟ್ಟಿದ್ದಾರೆ. ಬೊಲೆರೊ ದಲ್ಲಿದ್ದ ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶೃತಿ, ಆಕಾಶ ಮತ್ತು ಅಪೇಕ್ಷಾ ಗಂಭೀರ ಗಾಯಗೊಂಡಿ ದ್ದಾರೆ. ಇನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....