LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ನಾಳೆಯಿಂದ ಶಿಕ್ಷಕರ ವರ್ಗಾವಣೆ ಆರಂಭ - ಯಾವ ಯಾವ ದಿನ ಯಾರು ಯಾರ ವರ್ಗಾವಣೆ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ನಾಳೆಯಿಂದ ರಾಜ್ಯಾದ್ಯಂತ ಮತ್ತೊಂದು ಹಂತದಲ್ಲಿ ಶಿಕ್ಷಕರ ವರ್ಗಾವಣೆ ನಡೆಯಲಿದ್ದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಗಳಲ್ಲಿ ಈ ಒಂದು ಪ್ರಕ್ರಿಯೆ ನಡೆಯಲಿದ್ದು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಎಲ್ಲಾ ವ್ಯವಸ್ಥೆ ಗಳನ್ನು ಮಾಡಿಕೊಂಡಿದ್ದು ವಿಭಾಗದ ಗ್ರೂಪ್-'ಬಿ' ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ,ತತ್ಸಮಾನ ವೃಂದ ದವರು ಪ್ರಥಮ ಅಧಿಸೂಚನೆಯನ್ವಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಗ್ರೂಪ್-'ಬಿ' ವೃಂದದ ಅಧಿಕಾರಿಗಳ ವರ್ಗಾವಣೆ ಕೌನ್ಸೆಲಿಂಗ್ ಇದೇ 16, 17ರಂದು ನಡೆಯ ಲಿದೆ.ವಿಭಾಗದೊಳಗಿನ ಕೋರಿಕೆ ವರ್ಗಾವಣೆಗಳ ಮತ್ತು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕನಿಷ್ಠ ಸೇವೆ (3 ವರ್ಷ ಮೇಲ್ಪಟ್ಟು ಮತ್ತು 5 ವರ್ಷ ಒಳಗೆ) ಇರುವ ಅಧಿಕಾರಿ ಗಳಿಗೆ ಅನುಕ್ರಮವಾಗಿ 16, 17ರಂದು ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ

ಸಂಬಂಧಿಸಿದ ಅಧಿಕಾರಿಗಳು ಆಯುಕ್ತರ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಕೌನ್ಸೆಲಿಂಗ್‌ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬಹುದು.

ಇನ್ನೂ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ, ತತ್ಸಮಾನ ವೃಂದದ ಅಧಿಕಾರಿಗಳ ಅಂತಿಮ ಆದ್ಯತಾ ಪಟ್ಟಿಯನ್ನು ರಾಜ್ಯದ ಇಲಾಖೆಯ ವೆಬ್‌ಸೈಟ್ ನಲ್ಲಿ ‍ಪ್ರಕಟಿಸಲಾಗಿದೆ

ಸ್ಥಳ ಆಯ್ಕೆಗೆ ದಿನಾಂಕ ನಿಗದಿ ವಿಭಾಗದ ಘಟಕದೊಳಗಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರು,ದೈಹಿಕ ಶಿಕ್ಷಣ ಶಿಕ್ಷಕರು- ಗ್ರೇಡ್-2/ ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು/ ವಿಶೇಷ ಶಿಕ್ಷಕ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಸಂಬಂಧ ಅಂತಿಮ ಆದ್ಯತಾ ವರ್ಗಾವಣೆ ಪಟ್ಟಿಯಲ್ಲಿರುವವರಿಗೆ ಸ್ಥಳ ಆಯ್ಕೆ ಪ್ರಕ್ರಿಯೆಯುಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ.

ಡಿ. 16: ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು ಗ್ರೇಡ್-2 ಪರಸ್ಪರ ವರ್ಗಾವಣೆ.

ಡಿ. 21: ಪರಸ್ಪರ ವರ್ಗಾವಣೆ ಪ್ರೌಢ ಶಾಲಾ ವಿಭಾಗ ಸಹ ಶಿಕ್ಷಕರು ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹಾಗೂ ವಿಶೇಷ ಶಿಕ್ಷಕರು

ಕೋರಿಕೆ ವರ್ಗಾವಣೆ: ಡಿ.20ಕ್ಕೆ ಸಹಶಿಕ್ಷಕರು,ಸಹ ಶಿಕ್ಷಕರು ಡಿ. 22ಕ್ಕೆ ದೈಹಿಕ ಶಿಕ್ಷಣ ಶಿಕ್ಷಕರು, ಗ್ರೇಡ್-1 ವಿಶೇಷ ಶಿಕ್ಷಕರು

ಪರಸ್ಪರ ವರ್ಗಾವಣೆ: ಸಹಶಿಕ್ಷಕರು ದೈಹಿಕ ಶಿಕ್ಷಕರು ವಿಶೇಷ ಶಿಕ್ಷಕರು,ವರ್ಗಾವಣೆ ಕೌನ್ಸಲಿಂಗ್ ಹಾಜರಾಗುವ ಶಿಕ್ಷಕ ವೃಂದದವರು ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...