LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಳ್ಳಾರಿಯ ಮಂಜಮ್ಮನವರಿಗೆ ಗೌರವದ ಸನ್ಮಾನ.

ಬಳ್ಳಾರಿ -

ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಳ್ಳಾರಿಯ ಖ್ಯಾತ ಕಲಾವಿದೆ ಮಂಜಮ್ಮ ಜೋಗತಿ ಅವರಿಗೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಧರ್ಮಪತ್ನಿ ಲಕ್ಷ್ಮೀ ಅರುಣಾ ಅವರು ಗೌರವಪೂರ್ವಕವಾಗಿ ಸನ್ಮಾನಿಸಿದರು.

ಖ್ಯಾತ ಕಲಾವಿದೆ ಮಂಜಮ್ಮ ಜೋಗತಿ ಅವರನ್ನು ಆಹ್ವಾನಿಸಿ ತುಂಬು ಹೃದಯದಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡರು.

ಬಳ್ಳಾರಿ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ವಿಜಯನಗರ ಸಾಮ್ರಾಜ್ಯದ ಗತ ವೈಭವದ ಸಡಗರ ಸಂಭ್ರಗಳನ್ನು ಕಂಡ ಬಳ್ಳಾರಿ ಸೀಮೆಯು ಅನೇಕ ಮಹಾನ್ ಕಲಾವಿದರನ್ನು ಕಂಡ ಪುಣ್ಯ ಭೂಮಿ. ವಿಶ್ವ ವಿಖ್ಯಾತ ಜೋಳದ ರಾಶಿ ದೊಡ್ಡನಗೌಡರು, ಬಳ್ಳಾರಿ ರಾಘವ, ಕಾಳವ್ವ ಜೋಗತಿ, ತೊಗಲು ಗೊಂಬೆ ಆಟದ ಬೆಳಗಲಿ ವೀರಣ್ಣನವರು ಸೇರಿದಂತೆ ಹೀಗೆ ಅನೇಕ ಕಲಾವಿದರನ್ನು ಕಂಡ ಜಿಲ್ಲೆ ಬಳ್ಳಾರಿ.

ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಸಡಗರ ಸಂಭ್ರಮಗಳನ್ನು ಕಾಣುತ್ತಲೇ ಬಂದಿದೆ. ಈ ದಿನ ಕೇಂದ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಂಜಮ್ಮನವರು ಕಳೆದ ೨೦ ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ಮೊದಲ ಬಾರಿಗೆ ನಾವು ನಗರಸಭೆಯ ಆಡಳಿತದ ಚುಕ್ಕಾಣಿ ಹಿಡಿದಾಗ ನಗರಸಭೆಯ ವತಿಯಿಂದ ನಿರ್ಮಿಸಲಾದ ಪಾರ್ಕ್ ಒಂದರ ಉದ್ಘಾಟನಾ ಸಮಾರಂಭದಲ್ಲಿ ಇವರ ನೃತ್ಯದ ಅದ್ಬುತ ಕಲೆಯನ್ನು ಕಂಡು ನಾನು ಮುಖವಿಸ್ಮಿತನಾದೆ ಎಂದರು.

ಇಂತಹ ಅದ್ಬುತ ಕಲೆಯನ್ನು ನಾನು ಎಲ್ಲಿಯೂ ಕಂಡಿರಲಿಲ್ಲ. ಮುಂದೆ ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾದ ಸಂದರ್ಭದಲ್ಲಿಯೇ ಮಂಜಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತಹ ಅವಕಾಶ ದೊರಕಿರುವುದು ನಿಜಕ್ಕೂ ನನ್ನ ಅದೃಷ್ಟವೆಂದೇ ಭಾವಿಸುತ್ತೇನೆ. ಮಂಜಮ್ಮ ಅವರು ಇನ್ನೂ ನೂರಾರು ಕಾಲ ಬಾಳಿ ಬದುಕಲಿ, ಅವರ ಕಲೆಗೆ ನಮ್ಮ ಸದಾ ಪ್ರೋತ್ಸಾಹ ಇರುತ್ತದೆ. ಇಂತಹ ಕಲಾವಿದೆಯನ್ನು ಕಂಡ ಬಳ್ಳಾರಿ ಜಿಲ್ಲೆಯ ಜನತೆಗೆ ನಿಜಕ್ಕೂ ಹೆಮ್ಮಯ ಸಂಗತಿ. ಇದಕ್ಕೆ ಕಾರಣೀಭೂತರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ದಂಪತಿಗಳಿಂದ ಸನ್ಮಾನ ಸ್ವೀಕರಿಸುತ್ತಿದ್ದಂತೆ, ಮಂಜಮ್ಮ ಜೋಗತಿ ಅವರು ಭಾವುಕರಾದ ಅವರ ಕಣ್ಣಂಚಿನಲ್ಲಿ ನೀರು ತುಂಬಿ ಬಂದಿತು. ಈ ಸಂದರ್ಭದಲ್ಲಿ ಮಾತನಾಡಿದ ಮಂಜಮ್ಮ ಅವರು ಇಪ್ಪತ್ತು ವರ್ಷಗಳ ಹಿಂದೆ ನಮ್ಮ ಕಲೆಗೆ ಪ್ರೋತ್ಸಾಹ ನೀಡಿರುವ ತಾವು ಸಚಿವರಾಗಿದ್ದ ಸಂದರ್ಭದಲ್ಲಿ ಒಂದೇ ಮನವಿಗೆ ನನಗೆ ರಾಜ್ಯೋತ್ಸವ ಪ್ರಶಸ್ತಿ ದೊರೆಯಲು ಕಾರಣರಾದ ತಾವು ನನಗೆ ಸಾಕಷ್ಟು ಸಹಾಯ ಮಾಡಿರುವಿರಿ ಎಂದು ಹೇಳುತ್ತಾ, ರೆಡ್ಡಿ ಅವರಿಗೆ ಬಂದಿರುವ ಕಷ್ಟಗಳನ್ನು ನೆನಪಿಸಿಕೊಂಡ ಮಂಜಮ್ಮ ಅವರು ತಮ್ಮ ಕಣ್ಣಲ್ಲಿ ನೀರು ತಂದು ಮಾತು ಹೊರಡದಂತಾಗಿ ಧಗಧಗಿತರಾದರು. ಪಕ್ಕದಲ್ಲಿಯೇ ಇದ್ದ ಜನಾರ್ಧನ ರೆಡ್ಡಿ ಅವರು ಮಂಜಮ್ಮ ಅವರನ್ನು ಸಂತೈಸಿದರು.

https://youtu.be/wIBRcyIZZ7U

ಮತ್ತೆ ಸುಧಾರಿಸಿಕೊಂಡು ಮಾತನಾಡಿದ ಮಂಜಮ್ಮ ಅವರು ರೆಡ್ಡಿ ಅವರಿಗೆ ಒಳ್ಳೆಯದಾಗಲಿ, ಈ ಸರ್ಕಾರಗಳಲ್ಲಿಯೇ ನನಗೆ ಜಾನಪದ ಅಕಾಡೆಮಿ ಅಧ್ಯಕ್ಷನಾದೆ, ರಾಜ್ಯೋತ್ಸವ ಪ್ರಶಸ್ತಿ ಪಡೆದೆ ಇಂದು ಪದ್ಮಶ್ರೀ ಪ್ರಶಸ್ತಿಯನ್ನು ಇದೇ ಸರ್ಕಾರದಲ್ಲಿ ಪಡೆಯುತ್ತಿರುವುದು ನನಗೆ ತುಂಬಾ ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಭಾಗವಹಿಸಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....