LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉದ್ಯೋಗ ಕೊಡಿಸೋದಾಗಿ ವಂಚನೆ - KSRTC ಬಸ್ ಚಾಲಕ ಸೇರಿ ಇಬ್ಬರ ಬಂಧನ.....

ಬೆಂಗಳೂರು -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಂಚಾರಿ ನಿರೀಕ್ಷರ ಹುದ್ದೆ ಕೊಡಿಸುವುದಾಗಿ ನಂಬಿಸಿ ನೂರಾರು ಮಂದಿಯಿಂದ ಕೋಟ್ಯಂತರ ರೂ ವಂಚಿಸಿದ ಆರೋಪದ ಮೇಲೆ KSRTC ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಯ ಹಗರಿಬೊಮ್ಮನಹಳ್ಳಿ ಮೂಲದ ಮಂಜುನಾಥ್‌ ಬಿಲ್ಲಾ ನಾಯಕ್‌ (45) ಹಾಗೂ ಆತನ ಸ್ನೇಹಿತ ಅನಿಲ್‌ (41) ಬಂಧಿತರು. ಆರೋಪಿಗಳಾಗಿದ್ದಾರೆ. ಸುಮಾರು 500ಕ್ಕೂ ಅಧಿಕ ಮಂದಿಗೆ ಸುಮಾರು 15-18 ಕೋಟಿ ರೂ. ವಂಚಿಸಿ ದ್ದಾನೆಂತೆ.ಆತನ ಖಾತೆ ಪರಿಶೀಲಿಸಿದಾಗ ಸುಮಾರು 2.5 ಕೋಟಿ ರೂ. ಹಣ ಇರುವುದು ಪತ್ತೆಯಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಮಂಜುನಾಥ್‌ ಬಿಲ್ಲಾ ನಾಯಕ್‌ ಕೆಎಸ್‌ಆರ್‌ಟಿಸಿ ಚಾಲಕನಾಗಿದ್ದು, ತನ್ನ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ಮಾಡಿಕೊಂಡು ದಂಧೆ ನಡೆಸುತ್ತಿದ್ದ. ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ವಿ.ಎಸ್‌.ಅರಗಿಶೆಟ್ಟಿ ಎಂಬವರಿಗೆ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವು ದಾಗಿ 11 ಲಕ್ಷರೂ.ವಂಚಿಸಿದ್ದರು. ಬೆಂಗಳೂರಿನಲ್ಲಿ ಬಿಡದಿ ಯ ಎಸ್ ಎಸ್ ಬಿ ಯಲ್ಲಿ ಎಸ್‌ಡಿಎ ಆಗಿರುವ ಅವರ ಸಹೋದರ ವೀರೇಶ್‌ ಮನೆಗೆ ಹೋಗಿ ವಾಪಸ್‌ ಹೋಗು ವಾವ ಆರೋಪಿ ಮಂಜುನಾಥ್‌ ಪರಿಚಯವಾಗಿದೆ.ಈ ವೇಳೆ ಆರೋಪಿ ತನಗೆ ಇಲಾಖೆಯಲ್ಲಿ ಹಿರಿಯ ಅಧಿಕಾರಿ ಗಳು ಪರಿಚಯವಿದ್ದಾರೆ ಎಂದು ಹೇಳಿ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದಾನೆ.

ನಂತರ 2018ರಲ್ಲಿ ಬೆಂಗಳೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡು 2019ರವರೆಗೆ ವಿವಿಧ ಹಂತದಲ್ಲಿ 11 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾನೆ. ಈ ಸಂಬಂಧ ಮಾಗಡಿ ರಸ್ತೆ ಠಾಣೆಯಲ್ಲಿ ದೂರು ನೀಡಿದ್ದರು.ಈ ಹಿನ್ನೆಲೆ ಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಮಂಜುನಾಥ್‌ ವಂಚಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾನೆ.ಅದಕ್ಕಾಗಿ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರದ ನಾಮಫ‌ಲಕ ಹಾಕಿಕೊಂಡು ಉತ್ತರ ಕರ್ನಾಟಕದಲ್ಲಿ ತನ್ನ ಸ್ನೇಹಿತರ ಸುತ್ತಾಡುತ್ತಿದ್ದ.ಈ ವೇಳೆ ಪರಿಚಯವಾಗುವ ಮತ್ತು ಕರ್ತವ್ಯದ ವೇಳೆಯಲ್ಲಿ ಪರಿಚಯವಾಗುವ ಸಾರ್ವಜನಿಕ ರನ್ನು ಗುರಿಯಾಗಿಸಿಕೊಂಡು ಕೆಎಸ್‌ಆರ್‌ಟಿಸಿಯಲ್ಲಿ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದರು.

ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ ಸುಮಾರು 15ರಿಂದ 18 ಕೋಟಿ ರೂ. ವಂಚಿಸಿ ದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ಹೇಳಿದರು.ಹಣ ವಸೂಲಿಗೆಂದೇ ಆರೋಪಿ ಸುಮಾರು 30 ಮಂದಿ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ನೇಮಿಸಿಕೊಂ ಡಿದ್ದಾನೆ.ಸರ್ಕಾರ ಮತ್ತು ಇಲಾಖೆಯಲ್ಲಿ ಹಿರಿಯ ಅಧಿಕಾರಿ ಗಳು ರಾಜಕೀಯ ಮುಖಂಡರು ಪರಿಚಯವಿದ್ದಾರೆ ಎಂದು ನಂಬಿಸುತ್ತಿದ್ದ.ನಂಬಿದ ಸಾರ್ವಜನಿಕರಿಂದ ಹಣ ವಸೂಲಿಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದ.ನಂತರ ಸ್ನೇಹಿತರಿಗೆ ಇಂತಿಷ್ಟು ಹಣ ಕೊಡುತ್ತಿದ್ದ.ಆದರೆ ಆರೋಪಿ ಬಳಿ ಯಾವುದೇ ಆಸ್ತಿ-ಪಾಸ್ತಿ ಇಲ್ಲ.ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮೋಜು-ಮಸ್ತಿ ಮಾಡಿ ಕಳೆದಿದ್ದಾನೆ ಎಂದು ಪೊಲೀಸರು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...