LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭೂಗತ ಪಾತಕಿ ಬಚ್ಚಾಖಾನ್ ವಿಚಾರಣೆ – ಧಾರವಾಡದ ಉಪನಗರ ಪೊಲೀಸರಿಂದ ಬಿಡುವಿಲ್ಲದ ತನಿಖೆ

ಧಾರವಾಡ -

ಭೂಗತ ಪಾತಕಿ ಬಚ್ಚಾಖಾನ್ ನನ್ನು ವಶಕ್ಕೆ ತಗೆದುಕೊಂಡಿರುವ ಧಾರವಾಡ ಉಪನಗರ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ. ಈಗಾಗಲೇ ಬಚ್ಚಾಖಾನ್ ನನ್ನು ಧಾರವಾಡ ಉಪನಗರ ಪೊಲೀಸ್ ವಶಕ್ಕೆ ತಗೆದಕೊಂಡು ನಿನ್ನೇಯಷ್ಚೇ ನ್ಯಾಯಾಲಯಕ್ಕೆ ಹಾಜರು ಮಾಡಿ ನಾಲ್ಕು ದಿನಗಳ ಕಾಲ ವಶಕ್ಕೆ ತಗೆದುಕೊಂಡಿದ್ದಾರೆ.

ಮೈಸೂರು ಜೈಲಿನಲ್ಲಿದ್ದುಕೊಂಡೇ ಧಾರವಾಡದ ಅನೇಕರಿಗೆ ತನ್ನ ಬಂಟರ ಮೂಲಕ ಧಮ್ಕಿ ಹಾಕಿಸಿ ಹಫ್ತಾ ವಸೂಲಿಗಿಳಿದಿದ್ದನಂತೆ. ಈ ಕುರಿತಂತೆ ಧಾರವಾಡದ ರೆಹಮಾನ್ ಎಂಬುವರು ಉಪನಗರ ಪೊಲೀಸರಿಗೆ ದೂರನ್ನು ನೀಡಿದ್ದರು. ದೂರು ದಾಖಲು ಮಾಡಿಕೊಂಡಿದ್ದ ಉಪನಗರ ಇನಸ್ಪೇಕ್ಟರ್ ಪ್ರಮೋದ ಯಲಿಗಾರ ಮತ್ತು ಇತರೆ ಸಿಬ್ಬಂದಿಗಳು ಅನುಮತಿ ತಗೆದುಕೊಂಡು ಮೈಸೂರು ಕಾರಾಗೃಹದಿಂದ ವಶಕ್ಕೆ ತಗೆದುಕೊಂಡು ಬಂದಿದ್ದಾರೆ.

ಬಚ್ಚಖಾನ್ ಫ್ರೂಟ್ ಇರ್ಫಾನ್ ಸಾವಿನ ಬಳಿಕ ಹುಬ್ಬಳ್ಳಿ-ಧಾರವಾಡ ಮೇಲೆ ಹಿಡಿತ ಸಾಧಿಸಲು ಮುಂದಾಗಿದ್ದರಂತೆ.ಅಲ್ಲದೇ ಉಪನಗರ ಠಾಣೆ ವ್ಯಾಪ್ತಿಯಲ್ಲಿನ ಅನೇಕ ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದಂತೆ. ಪೆಟ್ರೋಲ್ ಬಂಕ್ ಮಾಲೀಕರು ಸೇರಿ ಅನೇಕರಿಗೆ ಬಚ್ಚಾಖಾನ್ ಬಂಟರಿಂದ ಧಮ್ಕಿ ಹಾಕಿದ್ದು ಈ ಒಂದು ಹಿನ್ನೆಲೆಯಲ್ಲಿ ಬಚ್ಚಾಖಾನ್ ನನ್ನು ಉಪನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೇ ನ್ಯಾಯಾಲಯಕ್ಕೇ ಹಾಜರು ಮಾಡಿದ್ದು ಸಧ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶದಲ್ಲಿದ್ದು ತನಿಖೆ ಮಾಡಲಾಗುತ್ತಿದೆ. ಜೈಲಿನಲ್ಲಿದ್ದುಕೊಂಡು ಹೇಗೆ ಬೆದರಿಕೆ ಹಾಕಲಾಗಿದೆ ಯಾರಿಂದ ಯಾರು ಹಾಕಿದ್ದಾರೆ ಇವೆಲ್ಲ ವಿಚಾರ ಕುರಿತಂತೆ ಇನಸ್ಪೇಕ್ಟರ್ ಪ್ರಮೋದ ಯಲಿಗಾರ,ಪಿಎಸೈ ಶ್ರೀಮಂತ ಹುಣಸಿಕಟ್ಟಿ ಸೇರಿದಂತೆ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ತನಿಖೆಯನ್ನು ಮಾಡ್ತಾ ಇದ್ದಾರೆ.ಬಿಡುವಲ್ಲದೇ ತನಿಖೆಯನ್ನು ಮಾಡುತ್ತಿದ್ದು ವಿಚಾರಣೆ ಸಮಯದಲ್ಲಿ ಕೆಲ ಮಹತ್ವದ ಮಾಹಿತಿಗಳು ದಾಖಲೆಗಳು ಪೊಲೀಸರಿಗೆ ಸಿಕ್ಕಿದ್ದು ಇನ್ನೂ ಕೂಡಾ ತನಿಖೆ ಮಾಡಲಾಗುತ್ತಿದೆ.

ಇದರೊಂದಿಗೆ ಇವನ ಇನ್ನೂ ಮೂವರು ಬಂಟರನ್ನು ಕೂಡಾ ಬಂಧಿಸಲಾಗಿದ್ದು ಅವರನ್ನು ಉಪನಗರ ಠಾಣೆ ಪೊಲೀಸರು ಬಚ್ಚಾಖಾನ್‌ ನೊಂದಿಗೆ ವಿಚಾರಣೆಯನ್ನು ಮಾಡುತ್ತಿದ್ದಾರೆ.ಕೆಲವು ಮಹತ್ವದ ವಿಚಾರಗಳು ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ಸಿಕ್ಕಿದ್ದು ಬಿಡುವಿಲ್ಲದೇ ತನಿಖೆ ನಡೆಯುತ್ತಿದೆ.

ಇನ್ನೂ ಉಪನಗರ ಪೊಲೀಸರಿಗೆ ಧಾರವಾಡ ಶಹರ ಪೊಲೀಸ್ ಠಾಣೆಯ ಇನಸ್ಪೇಕ್ಟರ್ ಶ್ರೀಧರ ಸತಾರೆ,ವಿದ್ಯಾಗಿರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಹಾಂತೇಶ ಬಸಾಪೂರ, ಸಂಚಾರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಲಗೌಡ ನಾಯ್ಕರ್, ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...