LIVE TV LocalCrimeNationalInternationalPoliticsEducationTechnologyEntertainmentSportsFeature
State News

ಜನೇವರಿ 1 ರಿಂದ SSLC ,PUC ಆರಂಭ - 6 ರಿಂದ 9ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ

ಬೆಂಗಳೂರು -

ತಜ್ಞರ ವರದಿ ಮೇರೆಗೆ ಜನವರಿ ಒಂದರಿಂದ SSLC , PUC ಯನ್ನು ಆರಂಭ ಮಾಡಲಾಗುತ್ತದೆ. ಇನ್ನೂ 1 ರಿಂದ 6ನೇ ತರಗತಿಯವರಿಗೆ ವಿದ್ಯಾಗಮ ಆರಂಭವಾಗಲಿದೆ.ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಮೊದಲು ಎಸ್ ಎಸ್ ಎಲ್ ಸಿ ಯ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭಗೊಳ್ಳಲಿವೆ. ತದನಂತರ 6 ರಿಂದ 9ನೇ ಕ್ಲಾಸ್ ಗಳ ವಿದ್ಯಾಗಮ ಆರಂಭಿಸಲಾಗುವುದು ಎಂದರು.

ಶಾಲಾ ಆರಂಭ ವಿಚಾರ ಕುರಿತಂತೆ ವಿಧಾನಸೌಧ ದಲ್ಲಿ ಸಭೆ ಮಾಡಲಾಯಿತು. ಸಭೆಯ ಬಳಿಕ ನಂತರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ SSLC ಪರೀಕ್ಷೆಗೆ ಸಮಿತಿ ವರದಿ ಕೊಟ್ಟಿತ್ತು. ನವೆಂಬರ್ ನಲ್ಲಿ ಡಿಸೆಂಬರ್ ವರೆಗೂ ಬೇಡ ಅಂತ ಸಮಿತಿ ಹೇಳಿತ್ತು. ಈಗ ಪ್ರಾರಂಭ ಮಾಡಿ ಅಂತ ಸಲಹೆ ಕೊಟ್ಟಿತ್ತು. ಸಿಎಂ ಸಹ ತಜ್ಞರ ವರದಿಗೆ ಸಮ್ಮತಿ ನೀಡಿದ್ದು, ಜನವರಿ 1 ರಿಂದ ಮೊದಲು 10-12 ನೇ ತರಗತಿ ಪ್ರಾರಂಭಕ್ಕೆ ಸಲಹೆ ಕೊಟ್ಟಿತ್ತು.

ತರಗತಿ ಪ್ರಾರಂಭಕ್ಕೆ ರೆಡಿ ಮಾಡಲಾಗಿದ್ದು ಎಷ್ಟು ಸಮಯ ಪಾಠ ಮಾಡಬೇಕು ಅಂತ ಸಿದ್ದತೆ ಮಾಡಿದ್ದೇವೆ. ವಿದ್ಯಾಗಮ ಕೂಡಾ ಪ್ರಾರಂಭ ಮಾಡಲಾಗ್ತಿದೆ. 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಆಗಲಿದೆ ಎಂದು ತಿಳಿಸಿದರು.ಇನ್ನೂ ಶಾಲಾ ಆವರಣದಲ್ಲಿ ವಿದ್ಯಾಗಮ ನಡೆಯಲಿದ್ದು, ವಾರಕ್ಕೆ 3 ದಿನ ಒಂದು ವಿದ್ಯಾರ್ಥಿ ಶಾಲೆಗೆ ಬರೋ ರೀತಿ ಸಿದ್ಧತೆ ಮಾಡಲಾಗಿದೆ. ವಿದ್ಯಾಗಮಕ್ಕೆ ಬರೋ ಮಕ್ಕಳು ಪೋಷಕರ ಒಪ್ಪಿಗೆ ಪತ್ರ ತರಬೇಕು. ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಇಲಾಖೆಯಿಂದ ಸರ್ಕಾರ ಶಾಲೆಗಳಿಗೆ ಸ್ಯಾನಿಟೈಸ್ ಜವಾಬ್ದಾರಿ ನೀಡಲಾಗಿದೆ.

ಖಾಸಗಿ ಶಾಲೆಗಳು ಆರರಿಂದ ಒಂಬತ್ತನೇ ತರಗತಿಯವರೆಗಿನ ಮಕ್ಕಳಿಗೆ ವಿದ್ಯಾಗಮ ಮಾಡಬಹುದು. ಹಾಸ್ಟೆಲ್ ಗಳು, ವಸತಿ ಶಾಲೆಗಳು ಕೂಡಾ ಪ್ರಾರಂಭ ಆಗಲಿದ್ದು, ಇಲ್ಲಿಗೆ ಬರುವ ಮಕ್ಕಳು ಮತ್ತು ಶಿಕ್ಷಕರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಾಲೆಗೆ ಬರೋದು ಕಡ್ಡಾಯ ಅಲ್ಲ. ಆನ್ ಲೈನ್ ಮೂಲಕ ಪಾಠ ಕಲಿಯಬಹುದು.

ಭಾನುವಾರ ಯಾವುದೇ ವಿಶೇಷ ಕ್ಲಾಸ್ ಗಳು ನಡೆಯಲ್ಲ. ಮುಂದಿನ ದಿನಗಳಲ್ಲಿ ಪಠ್ಯಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು. 15 ದಿನ ಪರಿಸ್ಥಿತಿ ನೋಡಿ ಪ್ರಥಮ ಪಿಯು ಪ್ರಾರಂಭದ ಬಗ್ಗೆ ನಿರ್ಧಾರ ಮಾಡಲಾಗುವುದು. ಶಾಲೆ ಆರಂಭವಾದ್ರೂ ಚಂದನ ವಾಹಿನಿಯಲ್ಲಿ ಆನ್ಲೈ ನ್ ಕ್ಲಾಸ್ ಮುಂದುವರಿಯಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...