LIVE TV LocalCrimeNationalInternationalPoliticsEducationTechnologyEntertainmentSportsFeature
Local News

ತನಿಖೆ ಆರಂಭಿಸಿದ ವಿದ್ಯಾನಗರ ಚಾರ್ಲಿ

ಹುಬ್ಬಳ್ಳಿ -

ಹುಬ್ಬಳ್ಳಿಯ ನವನಗರದಲ್ಲಿ ನಡೆದ ಪೊಲೀಸರ ಮತ್ತು ವಕೀಲರ ನಡುವಿನ ಪ್ರಕರಣದ ತನಿಖೆಯನ್ನು ಹುಬ್ಬಳ್ಳಿಯ ವಿದ್ಯಾನಗರ ಚಾರ್ಲಿ ಆರಂಭ ಮಾಡಿದ್ದಾರೆ.ನವನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ನ್ಯಾಯವಾದಿ ವಿನೋದ ಪಾಟೀಲ್ ಇನ್ನಿಬ್ಬರೊಂದಿಗೆ ಸೇರಿಕೊಂಡು ನವನಗರದ ಕರ್ನಾಟಕ ಸರ್ಕಲ್ ಬಳಿ ಯಾವುದೇ ಒಂದು ವಿಚಾರಕ್ಕೇ ಸಂಭಂಧಿಸಿದಂತೆ ರೌಡಿಶೀಟರ್ ಪ್ರವೀಣ ರಘುನಾಥ ಪೂಜಾರಿ , ಮಲ್ಲಯ್ಯ ಹಿರೇಮಠ ಹಾಗೂ ವಿನೋದ ಪಾಟೀಲ ಜೋರಾಗಿ ಹೊಡೆದಾಡುತ್ತಾ ಬೈದಾಡುತ್ತಾ ಗಲಾಟೆ ಮಾಡುತ್ತಿದ್ದರು.ಯಾಕೇ ಗಲಾಟೆ ಮಾಡಿಕೊಳ್ಳುತ್ತಿದ್ದಿರಾ ಹೋಗಿ ಇಲ್ಲಿಂದ ಎಂದು ಹೇಳಿದ ಪೊಲೀಸರ ವಿರುದ್ದವೇ ಮೂರು ಜನರು ತಿರುಗಿ ಬಿದ್ದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು.ಇದನ್ನು ಗಂಭೀರವಾಗಿ ತಗೆದುಕೊಂಡ ನವನಗರ ಇನಸ್ಪೇಕ್ಟರ್ ವಿನೋದ ಪಾಟೀಲ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲು ಮಾಡಿದ್ದರು. ದೂರನ್ನು ನವನಗರ ಇನಸ್ಪೇಕ್ಟರ್ ಪ್ರಭು ಸೂರಿನ್ ನೀಡಿದ್ದಾರೆ ಹೀಗಾಗಿ ತನಿಖೆಗೆ ಯಾರು ಕೂಡಾ ತಕರಾರು ಮಾಡಬಾರದೆಂಬ ಉದ್ದೇಶದಿಂದ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ರಾಮರಾಜನ್ ಈ ಒಂದು ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಇನಸ್ಪೇಕ್ಟರ್ ಆನಂದ ವನಕುದರಿಯವರಿದೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳು ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡುತ್ತಿದ್ದಂತೆ ಇತ್ತ ತನಿಖೆಯನ್ನು ಇನಸ್ಪೇಕ್ಟರ್ ಆನಂದ ವನಕುದರಿ ಆರಂಭ ಮಾಡಿದ್ದಾರೆ.

ನಿನ್ನೇ ಸಂಜೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ರಾತ್ರಿಯೇ ನವನಗರ ಪೊಲೀಸ್ ಠಾಣೆಗೆ ತೆರಳಿ ಪ್ರಕರಣದ ಪೈಲ್ ನ್ನು ತಗೆದುಕೊಂಡು ಬಂದು ತನಿಖೆ ಆರಂಭ ಮಾಡಿದ್ದಾರೆ. ನಿನ್ನೇ ತಡರಾತ್ರಿಯವರೆಗೆ ಕೇಸ್ ಅಧ್ಯಯನ ಮಾಡಿ ಇಂದು ಬೆಳಿಗ್ಗೆಯಿಂದಲೇ ತನಿಖೆಯನ್ನು ಮಾಡ್ತಾ ಇದ್ದಾರೆ.ಇನ್ನೂ ಇದೇ ವೇಳೆ ಸುದ್ದಿ ಸಂತೆಯ ವೇಬ್ ನ್ಯೂಸ್ ನೊಂದಿಗೆ ಮಾತನಾಡಿದ ಇನಸ್ಪೇಕ್ಟರ್ ಆನಂದ ವನಕುದರಿಯವರು ಹೌದು ನವನಗರದ ಗಲಾಟೆ ಪ್ರಕರಣದ ತನಿಖೆಯನ್ನು ನಾನೇ ಮಾಡುವಂತೆ ಹಿರಿಯ ಅಧಿಕಾರಿಗಳು ಹೇಳಿದ್ರು ಹೀಗಾಗಿ ತನಿಖೆಯ ಪೈಲ್ ನ್ನು ಈಗಾಗಲೇ ತಗೆದುಕೊಂಡು ಆರಂಭ ಮಾಡಿದ್ದೇನೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...