LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ - ತಂದೆಯ ಪರವಾಗಿ ವಿನಯ ಕುಲಕರ್ಣಿ ಪುತ್ರಿ ಭರ್ಜರಿ ಮತಭೇಟೆ.....

ಧಾರವಾಡ -

ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ ಇದು ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಪರವಾಗಿ ಮಗಳಿಗೆ ಮತದಾರರು ಹೇಳುತ್ತಿರುವ ಮಾತುಗಳು

ನೀವು ಇವತ್ತ ನಮ್ಮ ಮನಿ ಬಾಗಿಲಿಗಿ ಬಂದೀರಿ ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ ಆದರೆ ಅನ್ನೋ ಅಭಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅವರಿಗೆ ಸಿಕ್ಕಿದೆ.

ಹೌದು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪುತ್ರಿ ವೈಶಾಲಿ ಅವರು ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ತಮ್ಮ ತಂದೆ ಪರ ಬಿರುಸಿನ ಪ್ರಚಾರ ನಡೆಸಿದರು.

ತಲವಾಯಿ ಗ್ರಾಮದಲ್ಲಿ ಹಿರಿಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಕರಪತ್ರ ನೀಡಿ ತಮ್ಮ ತಂದೆ ವಿನಯ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ವೈಶಾಲಿ ಅವರು ತಲವಾಯಿ ಗ್ರಾಮದ ಮನೆಯೊಂದಕ್ಕೆ ಹೋಗಿ ನಮ್ಮ ತಂದೆಯವರು ಬರಲು ಆಗಿಲ್ಲ ಅದಕ್ಕೆ ನಾವೇ ಬಂದು ಮತ ಕೇಳುತ್ತಿದ್ದೇವೆ ನಮಗೆ ಮತ ನೀಡಿ ಎಂದು ಮನವಿ ಮಾಡಿದರು.

ಮಹಿಳೆಯೊಬ್ಬರು ನಿಮ್ಮ ತಂದೆ ಬಂದಿದ್ದಕ್ಕಿಂತ ಹೆಚ್ಚಾಯ್ತು ನಾವು ನಿಮಗೇ ಮತ ಹಾಕ್ತೀವಿ ಅಂತಾ ಅಭಯ ನೀಡಿದರು.ಈ ವೇಳೆ ಮಾತ ನಾಡಿದ ವೈಶಾಲಿ ಕುಲಕರ್ಣಿ ಈ ಬಾರಿ ನಮ್ಮ ತಂದೆಯವರಾದ ವಿನಯ್ ಕುಲಕರ್ಣಿ ಅವರು 50 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ.

ಅದರಲ್ಲಿ ಯಾವುದೇ ಸಂದೇಹವಿಲ್ಲ. ನಾವು ಹೋದ ಕಡೆಗಳಲ್ಲೆಲ್ಲ ಉತ್ತಮ ಜನ ಬೆಂಬಲ ವ್ಯಕ್ತವಾಗುತ್ತಿದೆ. ಹಿರಿಯರು ಪಕ್ಷದ ಕಾರ್ಯಕರ್ತ ರಿಂದ ಉತ್ತಮ ಜನಸ್ಪಂದನೆ ಸಿಗುತ್ತಿದೆ. ನಮ್ಮ ತಂದೆಯವರು ಸಚಿವರಿದ್ದ ಸಂದರ್ಭದಲ್ಲಿ ಪ್ರತಿ ತಿಂಗಳು ಉದ್ಯೋಗ ಮೇಳ ಮಾಡಿ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದರು. ಅಂತಹ ಕೆಲಸಗಳು ಬಿಜೆಪಿ ಶಾಸಕರ ಅವಧಿ ಯಲ್ಲಿ ಆಗಲಿಲ್ಲ ಎಂದರು.ಒಟ್ಟಾರೆ ವೈಶಾಲಿ ಕೂಡ ತಮ್ಮ ತಂದೆ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದು, ಅವರಿಗೂ ಉತ್ತಮ ಜನ ಸ್ಪಂದನೆ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....