LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವೀರಶೈವ ಲಿಂಗಾಯತ ,ಮರಾಠ ನಿಗಮಕ್ಕೇ ಸ್ವಾಗತ – ಧಾರವಾಡದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಧಾರವಾಡ

ವೀರಶೈವ ಲಿಂಗಾಯತ ಮರಾಠ ನಿಗಮಕ್ಕೇ ಸ್ವಾಗತಿಸಿ ಧಾರವಾಡದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು. ವೀರಶೈವ ಮತ್ತು ಲಿಂಗಾಯತ ಅಭಿವೃದ್ದಿ ನಿಗಮಕ್ಕೇ ಮುಖ್ಯಮಂತ್ರಿ ಆದೇಶ ನೀಡುತ್ತಿದ್ದಂತೆ ಇತ್ತ ಧಾರವಾಡದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಎರಡು ನಿಮಗದ ಆರಂಭಕ್ಕೇ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಸ್ವಾಗತಿಸುವ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಮಾಡಿದರು. ನಗರದ ಜುಬಲಿ ವೃತ್ತದಲ್ಲಿನ ಬಸವೇಶ್ವರ ಪ್ರತಿಮೆಗೆ ಮಾಜಿ ಶಾಸಕಿ ಸೀಮಾ ಮಸೂತಿ ನೇತತ್ವದಲ್ಲಿ ಮಾಲಾರ್ಪಣೆ ಮಾಡಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು.

ಮೊದಲು ವಿಶ್ವಗುರು ಬಸವೇಶ್ವರರಿಗೆ ಸಾಮೂಹಿಕವಾಗಿ ಮಾಲಾರ್ಪಣೆ ಮಾಡಿದರು.ನಂತರ ಇತ್ತ ಶಿವಾಜಿ ವೃತ್ತದಲ್ಲಿರುವ ಶಿವಾಜಿ ಪ್ರತಿಮೆಗೆ ಕೂಡಾ ಮಾಲಾರ್ಪಣೆ ಮಾಡಿದರು. ಅಲ್ಲೂ ಕೂಡಾ ನಂತರ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು.

ಇದೇ ವೇಳೆ ಸಿಹಿ ತಿನ್ನಿಸಿ ಸಂಬ್ರಮಿಸಿ ಮುಖ್ಯಮಂತ್ರಿ ನಿರ್ಧಾರವನ್ನು ಸ್ವಾಗತಿಸಿದ್ರು.ಇನ್ನೂ ಈ ಒಂದು ಕಾರ್ಯಕ್ರಮವು ಮಾಜಿ ಶಾಸಕಿ ಸೀಮಾ ಮಸೂತಿ ನೇತ್ರತ್ವದಲ್ಲಿ ನಡೆದಿದ್ದು ಇವರೊಂದಿಗೆ ಸಂಗನಗೌಡ ರಾಮನಗೌಡರ ,ರುದ್ರಪ್ಪ ಹರಿವಾನ, ಸುನೀನ ಮೋರೆ, ಶಂಕರ ಶೇಳಕೆ,ಮಹೇಶ ಯಲಿಗಾರ,ಶಿವು ಬೆಳಾರದ ಶಂಕರ ಕೋಮಾರದೇಸಾಯಿ ,ರಾಜು ಜಿವನ್ನವರ

ಸಂಬಾಜೀ ಜಾಧವ ,ಯಲ್ಲಪ್ಪ ಜಾನೂಕನವರ ,ಮಲ್ಲಿಕಾರ್ಜನ ಗೋಕಾವಿ ,ವಿಕ್ರಮ ಹುಣಸಿಕಟ್ಟಿ, ವೀರನಗೌಡ ಪಾಟೀಲ, ಸಿದ್ದನಗೌಡ ಪಾಟೀಲ ,ಈರಯ್ಯ ಹಿರೇಮಠ, ಗೋಮಿಂದ ಮಮ್ಮಿಗಟ್ಟಿ, ಸೇರಿದಂತೆ ಹಲವರು ಹಾಗೇ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಕಾರ್ಯಕರ್ತರು ಇತ್ತ ಮರಾಠ ಸಮಾಜದ ಹಿರಿಯರು ಮುಖಂಡರು ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...