LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿಜಾಬ್ ಪ್ರಕರಣದಲ್ಲಿ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದವರು ಅಂದರ್ - ಬೆದರಿಕೆ ಹಾಕಿದವರು ಯಾರು ಎಲ್ಲಿಯವರು ಹಿನ್ನಲೆ ಏನು ಗೊತ್ತಾ ಇಲ್ಲಿದೆ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ಹಿಜಾಬ್ ವಿಚಾರ ಕುರಿತಂತೆ ತೀರ್ಪನ್ನು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಹೌದು ತೀರ್ಪನ್ನು ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಅಪರಿಚಿ ತರು ಜೀವ ಬೆದರಿಕೆ ಹಾಕಿದ್ದರು.ಇದು ದೇಶದೆಲ್ಲೆಡೆ ತೀವ್ರ ಆತಂಕಕ್ಕೆ ಕಾರಣವಾಗಿತ್ತು.ಅಪರಿಚಿತ ವ್ಯಕ್ತಿಗಳು ವಾಟ್ಸಾಫ್ ವೀಡಿಯೋದಲ್ಲಿ ನ್ಯಾಯಮೂರ್ತಿಗಳನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ್ದರು.ಈ ಕುರಿತು ನ್ಯಾಯ ವಾದಿ ಸುಧಾಕಾಟ್ವಾ ಎಂಬುವರು ಬೆಂಗಳೂರಿನ ವಿಧಾನ ಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇದನ್ನು ರಾಜ್ಯ ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದು ರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ʼವೈʼ ಭದ್ರತೆ ಶ್ರೇಣಿಯ ರಾಜ್ಯ ಸರ್ಕಾರ ನೀಡಿತ್ತು.ಇದೀಗ ಬೆದರಿಕೆ ಹಾಕಿದ್ದ ಇಬ್ಬರ ನ್ನು ಪೊಲೀಸರು ಬಂಧಿಸಿದ್ದಾರೆ.

ಹೈಕೋರ್ಟ್‌ ನೀಡಿದ ತೀರ್ಪಿನಲ್ಲಿ ಏನಿದೆ……..

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್‌ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು.ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿತ್ತು. ಕುರಾನ್ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಪಡಿಸಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠದ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿತ್ತು. ಹಿಜಾಬ್ ಬಗ್ಗೆ ಕುರಾನ್ನಲ್ಲಿ ಯಾವುದೇ ಪ್ರಸ್ತಾಪವಿಲ್ಲ ಅಂತ ಹೈಕೋರ್ಟ್ ಹೇಳಿತ್ತು. ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಹೇಳಿ ತೀರ್ಪು ಪ್ರಕಟಿಸಿತ್ತು.

ಯಾರಿಗೆ ಬಂದಿತ್ತು ಜೀವ ಬೆದರಿಕೆ?

ಕಳೆದ ವಾರವಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗ ಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನೆಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ವಿಶೇಷ ಪೀಠ ಹಿಜಾಬ್ ವಿವಾದ ಕುರಿತಂತೆ ತೀರ್ಪು ನೀಡಿದ್ದರು. ಇದೇ ಕಾರಣಕ್ಕೆ ಅಪರಿಚಿತರು ಹೈಕೋರ್ಟ್ ನ್ಯಾಯಮೂರ್ತಿ ಗಳಿಗೆ ಜೀವ ಬೆದರಿಕೆ ಹಾಕಿದ್ದರು.

ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಅಪರಿಚಿತರು

ಅಪರಿಚಿತರು ವಾಟ್ಸಾಪ್ ವಿಡಿಯೋದಲ್ಲಿ ತಮಿಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದರು. ಸುಮಾರು 4 ನಿಮಿಷ ಇರೋ ಒಂದು ವಿಡಿಯೋವನ್ನು ವಾಟ್ಸಪ್ ಗೆ ಕಳುಹಿಸಿದ್ದು, ಅದು ತಮಿಳು ಭಾಷೆಯಲ್ಲಿತ್ತು. ಆ ವಿಡಿಯೋದಲ್ಲಿ ಹಿಜಾಬ್ ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದರು.

ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು

ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಕುರಿತಂತೆ ವಕೀಲೆ ಸುಧಾಕಾಟ್ವ ಎಂಬವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್‌ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್‌ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‌ಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು.

ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್

ಈ ಬಗ್ಗೆ ದೂರು ಪಡೆದ ಪೊಲೀಸರು, ತಮಿಳುನಾಡಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂದಿತರನ್ನು ಕೋವೈ ರಹಮತುಲ್ಲಾ ಹಾಗೂ ಎಸ್. ದಮಾಲ್ ಮೊಹಮ್ಮದ್ ಉಸ್ಮಾನಿ ಎಂಬುವರನ್ನು ಬಂಧಿಸಲಾಗಿದೆ. ಕೋವೈ ರಹಮತುಲ್ಲಾನನ್ನು ತಿರುನಲ್ವೇಲಿಯಿಂದ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರಿನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಬಂಧಿತ ಆರೋಪಿಗಳ ಹಿನ್ನೆಲೆ ಏನು?

ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಸದಸ್ಯರಾಗಿದ್ದಾರೆ. ಇದೀಗ ಬಂಧಿತರ ವಿಚಾರಣೆ ನಡೆಯುತ್ತಿದ್ದು ಸಧ್ಯ ಇಬ್ಬರನ್ನು ವಶಕ್ಕೆ ತಗೆದುಕೊಂಡಿರುವ ವಿಧಾನ ಸೌಧ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದು ಸಮಗ್ರವಾಗಿ ವಿಚಾರಣೆಯನ್ನು ಮಾಡ್ತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....