LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರಾಯಿ ಮಾರಾಟ ಮಾಡುತ್ತಿದ್ದ ಮಹಿಳೆ ಬಂಧನ – ಅಪಾರ ಪ್ರಮಾಣದ ಸರಾಯಿ ಪ್ಯಾಕೆಟ್ ಗಳು ವಶ

ಹುಬ್ಬಳ್ಳಿ -

ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಬಂಧನ ಮಾಡಿದ್ದಾರೆ. ಹುಬ್ಬಳ್ಳಿಯ ಗ್ರಾಮೀಣ ಇನಸ್ಪೇಕ್ಟರ್ ರಮೇಶ ಗೋಕಾಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ಮಾಡಿದ ಪೊಲೀಸರು ಸರಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಬಂಧನ ಮಾಡಿದ್ದಾರೆ, ಹುಬ್ಬಳ್ಳಿಯ ಕುರುಡಕೇರಿ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಸರಾಯಿಯನ್ನು ಮಾರಾಟ ಮಾಡುತ್ತಿದ್ದಳು ಮಹಿಳೆ. ಇಂದೂಬಾಯಿ ಜಾಧವ ಬಂದಿತ ಮಹಿಳೆಯಾಗಿದ್ದಾಳೆ.

ಬಂದಿತ ಮಹಿಳೆ ಕುರುಡಕೇರಿ ಗ್ರಾಮದ ನಿವಾಸಿಯಾಗಿದ್ದು ವಯಕ್ತಿಕ ಲಾಭದಗೊಸ್ಕರವಾಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತುಕೊಂಡು ಸರಾಯಿಯನ್ನು ಮಾರಾಟ ಮಾಡುತ್ತಿದ್ದಳು. ಖಚಿತವಾದ ಮಾಹಿತಿಯನ್ನು ಪಡೆದುಕೊಂಡ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ಮಾಡಿ ಮಹಿಳೆಯನ್ನು ಬಂಧನ ಮಾಡಿದ್ದಾರೆ.17 ಪ್ಯಾಕೇಟ್ ಒರಿಜನಲ್ ಚಾಯ್ಸ್ ಟೆಟ್ರಾ ಪೌಚ್ ಗಳು ಹೈವರ್ಡಸ್ ಮತ್ತು ಪೈವ್ ಸ್ಟಾರ್ ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

1788 ಮೌಲ್ಯದ ಸರಾಯಿ ಪ್ಯಾಕೇಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇನ್ನೂ ಬಂಧಿತ ಮಹಿಳೆಯಿಂದ ಇನಸ್ಪೇಕ್ಟರ್ ರಮೇಶ ಗೋಕಾಕ ಅವರೊಂದಿಗೆ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾರಾಯಣ ಹಿರೇಹೊಳಿ,ಮಂಜು ಎಳವಾರ,ಮಹಾಂತೇಶ ನ್ಯಾನಗೌಡ, ದಾಬೋಳಿ, ಡೇವಿಡ್ ಸೇರಿದಂತೆ ಹಲವು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯನ್ನು ಬಂಧನ ಮಾಡಿರುವ ಗ್ರಾಮೀಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ನ್ಯಾಯಾಂಗ ಬಂಧನಕ್ಕೇ ಒಪ್ಪಿಸಿದ್ದಾರೆ. ಪ್ರಮುಖವಾಗಿ ಗ್ರಾಮ ಪಂಚಾಯತ ಚುನಾವಣೆಯಲ್ಲಿ ವಯಕ್ತಿಕ ಲಾಭದಗೊಸ್ಕರವಾಗಿ ಸರಾಯಿ ಪ್ಯಾಕೇಟ್ ಗಳನ್ನು ತಗೆದುಕೊಂಡು ಬಂದು ಮಾರಾಟ ಮಾಡುತ್ತಿದ್ದಳು ಮಹಿಳೆ.ಈ ಕುರಿತಂತೆ ಗ್ರಾಮಸ್ಥರು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರಿಗೆ ದೂರನ್ನು ನೀಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....