LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಏಕದಿನ ಕ್ರಿಕೆಟ್ ಸರಣಿ ಸೋತ್ರು – ಟಿ 20 ಸರಣಿ ಗೆದ್ರು

ಸಿಡ್ನಿ -

ಏಕದಿನ ಕ್ರಿಕೆಟ್ ಸರಣಿಯಲ್ಲಿ ಹೀನಾಯವಾಗಿ ಸೋತಿದ್ದ ಭಾರತ ಕ್ರಿಕೇಟ್ ತಂಡ ಟಿ 20 ಕ್ರಿಕೇಟ್ ಸರಣಿಯನ್ನು ಇನ್ನೂ ಒಂದು ಪಂದ್ಯ ಇರುವಾಗಲೇ ಗೆಲುವು ಸಾಧಿಸಿದೆ.ಹೌದು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಈಗಾಗಲೇ ಏಕದಿನ ಕ್ರಿಕೇಟ್ ಪಂದ್ಯದಲ್ಲಿ ಸೋತ ತಂಡ ಈಗ ಟಿ 20 ಸರಣಿಯನ್ನು ಗೆದ್ದು ಸೇಡನ್ನು ತಿರಿಸಿಕೊಂಡಿದೆ.

ಅದು ಇನ್ನೂ ಒಂದು ಪಂದ್ಯ ಬಾಕಿ ಇರವಾಗಲೇ ಸರಣಿಯನ್ನು ಗೆದ್ದಿದೆ. ಇಂದು ನಡೆದ ಎರಡನೇಯ ಟಿ 20 ಪಂದ್ಯದಲ್ಲಿ ಭಾರತ ತಂಡ ಆಸೀಸ್‌ ತಂಡವನ್ನು ಎರಡನೇ ಟಿ 20 ಪಂದ್ಯದಲ್ಲಿ ಮಣಿಸಿದೆ.

ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಗೆದ್ದುಕೊಂಡಿದೆ.ಇನ್ನೂ ಇಂದು ನಡೆದ ಎರಡನೇಯ ಪಂಧ್ಯದಲ್ಲಿ ಆರಂಭಿಕ ಶಿಖರ್‌ ಧವನ್ ಅವರ ಏಕೈಕ ಅರ್ಧಶತಕ, ಹಾಗೂ ಅಗ್ರ ಕ್ರಮಾಂಕದ ಆಟಗಾರರ ಅತ್ಯಮೂಲ್ಯ ಕೊಡುಗೆಯಿಂದ ಭಾರತ ಎರಡನೇ ಚುಟುಕು ಪಂದ್ಯವನ್ನು ನಾಲ್ಕು ವಿಕೆಟ್ ಗಳಿಂದ ಗೆದ್ದು ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಂಡಿದೆ.ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ವಿರಾಟ್ ಕೊಹ್ಲಿ ಪಡೆಯ ಬೌಲರ್ ಗಳನ್ನು ಬೆನ್ನಟ್ಟಿದ ಆಸೀಸ್ ಆಟಗಾರರು ಆರಂಭ ದಿಂದಲೇ ಬಿರುಸಿನಿಂದ ಬ್ಯಾಟ್ ಬೀಸಿದರು. ನಾಯಕನ ಸ್ಥಾನ ತುಂಬಿದ ಮ್ಯಾಥ್ಯೂ 58 ರನ್ ಗಳಿಸಿ, ತಂಡದ ಸ್ಕೋರ್ ಹೆಚ್ಚಾಗಲು ಪ್ರಮುಖ ಕಾರಣರಾದರು.ಇನ್ನೂ ಸ್ಟೀವನ್ ಸ್ಮಿತ್ 46 ರನ್ ಗಳ ಕೊಡುಗೆ ನೀಡಿದರು. ಅಂತಿಮ ಕ್ಷಣದವರೆಗೂ ಆಸೀಸ್ ಆಟಗಾರರ ಅಬ್ಬರದ ಬ್ಯಾಟಿಂಗ್ ನಿಂದ 20 ಓವರ್ ನಲ್ಲಿ 5 ವಿಕಟ್ ನಷ್ಟಕ್ಕೆ 194 ರನ್ ಪೇರಿಸಿ 195 ರ ಬೃಹತ್ ಗುರಿಯನ್ನು ಭಾರತಕ್ಕೆ ನೀಡಿತು.

ಈ ಸವಾಲನ್ನು ಬೆನ್ನತ್ತಿದ ಭಾರತ ತಂಡಕ್ಕೆ ಧವನ್ ಹಾಗೂ ಕೆ.ಎಲ್ ರಾಹುಲ್ ಜೋಡಿ ಆಶದಾಯಕ ಆರಂಭವನ್ನು ನೀಡಿದರು. ರಾಹುಲ್ 30 ರನ್ ಗಳಿಸಿ ಔಟ್ ಆದರು. ಧವನ್ ಅಮೋಘವಾದ ಬ್ಯಾಟಿಂಗ್ ನಿಂದ 52 ರನ್ ಗಳ ಕೊಡುಗೆ ನೀಡಿ ಜಂಪಾ ಎಸೆತದಲ್ಲಿ ಔಟ್ ಆದರು.

ಇನ್ನೂ ನಂತರ ಬಳಿಕ ಬಂದ ನಾಯಕ ಕೊಹ್ಲಿ ಬಿರುಸಿನ ಆಟದಿಂದ ಒತ್ತಡದಿಂದ ತಂಡವನ್ನು ಪಾರು ಮಾಡುವ ಪ್ರಯತ್ನ ಮಾಡಿದರು. 42 ರನ್ ಗಳಿಸಿ ವಿರಾಟ್ ಕೊಹ್ಲಿ ಔಟ್ ಸ್ಯಾಮ್ಸ್ ಎಸೆತಕ್ಕೆ ಕೀಪರ್ ಕ್ಯಾಚ್ ಕೊಟ್ಟು ನಿರ್ಗಮಿಸಿದರು.ನಂತರ ಬಂದ ಉಳಿದ ಆಟಗಾರರು ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...