ಹುಬ್ಬಳ್ಳಿ –
ಮುಂದಿನ ಸಿಎಂ ಡಿ.ಕೆ ಶಿವಕುಮಾರ್ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಡಿಕೆಶಿ ಬೆಂಬಲಿಗರು ಹೌದು ಮುಂದಿನ ಐದು ವರ್ಷಗಳ ಕಾಲ ನಾನೇ ಸಿಎಂ ಎನ್ನುತ್ತಿರುವ ಸಿದ್ದರಾಮಯ್ಯ ಅವರಿಗೆ ಡಿಕೆ ಶಿವಕುಮಾರ್ ಬೆಂಬಲಿಗರು ಠಕ್ಕರ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಡಿಕೆಶಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ.ಡಿಸಿಎಂ ಡಿಕೆಶಿ ಗದಗಕ್ಕೆ ತೆರಳುವ ಮಾರ್ಗಮಧ್ಯೆ ಅಭಿಮಾನಿಗಳು ಜೆಸಿಬಿ ಮೂಲಕ ಡಿಕೆಶಿ ಹೂವಿನ ಸುರಿಮಳೆಗೈದು ಡಿಕೆಶಿ ಅವರಿಗೆ ಜಯವಾಗಲಿದೆ ಎಂದು ಘೋಷಣೆ ಕೂಗಿದರು. ಮುಂದಿನ ಸಿಎಂ ಡಿಕೆ ಶಿವಕುಮಾರ್ ಡಿಕೆಶಿಗೆ ಜಯವಾಗಲಿ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗಿದ್ದು ಕಂಡು ಬಂದಿತು.
ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆ ಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲಿಗರು ಟಕ್ಕರ್ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..