ರಾಜ್ಯದಲ್ಲಿ ಮತ್ತೆ ನೈಟ್ ಕರ್ಪ್ಯೂ ಡಿಸೆಂಬರ್ 28 ರಿಂದ ಆರಂಭ ಹೊಸ ವರ್ಷಾಚರಣೆಗೆ ಬಿತ್ತು ಬ್ರೇಕ್…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ನೈಟ್ ಕಫ್ರ್ಯೂ ವನ್ನು ಜಾರಿ ಮಾಡಲಾಗಿದೆ. ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ಒಂದು ಮಹತ್ವದ ನಿರ್ಣಯ ವನ್ನು ತೆಗೆದುಕೊಳ್ಳಲಾಗಿದೆ.ಸೋಂಕು ನಿಯಂ ತ್ರಣ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿಲಾಗಿದೆ

ಸಿಎಂ ಬಸವರಾಜ್ ಬೊಮ್ಮಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ರಾಜ್ಯಾದ್ಯಂತ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಬಹಿರಂಗ ಪಾರ್ಟಿಗಳಿಗೂ ಕಡಿವಾಣ ಹಾಕಲಾಗಿದೆ. ಸಭೆ ಸಮಾರಂಭಗಳಿಗೆ ಶೇ.50ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ ಎಂದರು.ಇದರೊಂದಿಗೆ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.