ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಗಮನಿಸಿ ಈ ಕೂಡಲೇ ಕೆಲಸ ಮಾಡಲು ಸೂಚನೆ ಗಮನಕ್ಕೆ

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಗಮನಿಸಿ ಈ ಕೂಡಲೇ ಕೆಲಸ ಮಾಡಲು ಸೂಚನೆ ಗಮನಕ್ಕೆ

ಬೆಂಗಳೂರು

ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ  ಕೂಡಲೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆಯನ್ನು ನೀಡಿದೆ ಹೌದು ಎಲ್ಲಾ ಪ್ರಮುಖ ಬ್ಯಾಂಕ್ ಗಳಲ್ಲಿ ಒದಗಿಸು ತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ಸರ್ಕಾರ ತಿಳಿಸಿದೆ.

ಪ್ರತಿಯೊಬ್ಬ ಸರ್ಕಾರಿ ನೌಕರರ ತಮ್ಮ ESS Login ನಲ್ಲಿ PMJJBY ಹಾಗೂ PMSBY ಮಾಹಿತಿಯನ್ನು ತುಂಬಿ Submit ಮಾಡಲೇಬೇಕು ಎಂದು ಸೂಚನೆ ನೀಡಲಾಗಿದೆ.ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ ಎರಡು ಅಮೂಲ್ಯ ವಾದ ವಿಮಾ ಯೋಜನೆಗಳಾದ – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯನ್ನು ತೆರೆಯಲು ಕೋರಲಾಗಿದೆ.

ಈ ಯೋಜನೆಯನ್ನು ತಮ್ಮ ವೇತನ ಖಾತೆ ಬ್ಯಾಂಕ್ ಮುಖಾಂತರ ಪಡೆಯಬಹುದಾಗಿದೆ. ಹೆಚ್ಚಿನ ವಿವರಕ್ಕಾಗಿ https://www.jansuraksha.gov.in/ ಲಿಂಕ್ ಅನ್ನು ಪ್ರವೇಶಿಸಬಹುದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.