This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

98 ಅಧಿಕಾರಿಗಳಿಗೆ ನೋಟಿಸ್ – ಕರ್ತವ್ಯ ಲೋಪ ಹಿನ್ನಲೆಯಲ್ಲಿ ನೋಟಿಸ್…..ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಸಂಚಲವನ್ನುಂಟು ಮಾಡಿದ ಸಾಮೂಹಿಕ ನೊಟೀಸ್…..

98 ಅಧಿಕಾರಿಗಳಿಗೆ ನೋಟಿಸ್ – ಕರ್ತವ್ಯ ಲೋಪ ಹಿನ್ನಲೆಯಲ್ಲಿ ನೋಟಿಸ್…..ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಸಂಚಲವನ್ನುಂಟು ಮಾಡಿದ ಸಾಮೂಹಿಕ ನೊಟೀಸ್…..
WhatsApp Group Join Now
Telegram Group Join Now

ಬೆಂಗಳೂರು

98 ಅಧಿಕಾರಿಗಳಿಗೆ ನೋಟಿಸ್ – ಕರ್ತವ್ಯ ಲೋಪ ಹಿನ್ನಲೆಯಲ್ಲಿ ನೋಟಿಸ್…..ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಸಂಚಲವನ್ನುಂಟು ಮಾಡಿದ ಸಾಮೂಹಿಕ ನೊಟೀಸ್

ದೇವರು ವರ ಕೊಟ್ಟರು ಪೂಜಾರಿ ಕೊಡೊದಿಲ್ಲ ಎಂಬ ಗಾದೆ ಮಾತಿನ ಹಾಗೆ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಪರಸ್ಥಿತಿ ಆಗಿದೆ ಹೌದು ಇದಕ್ಕೆ ತಾಜಾ ಉದಾಹರಣೆ ಮೊಟ್ಟೆ ವಿತರಣೆ ಕಾರ್ಯ ಕ್ರಮ. ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್‌ ನೀಡಿದೆ.

ಪಿ.ಎಂ. ಪೋಷಣ್‌ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ವಾರಕ್ಕೆ ಆರು ಮೊಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನುವುದಿಲ್ಲ ಎಂದು ಬೇಡಿಕೆ ಸಲ್ಲಿಸುವ ಮಕ್ಕಳಿಗೆ ನಿಯಮದಂತೆ ಚಿಕ್ಕಿ, ಬಾಳೆಹಣ್ಣನ್ನು ಕೂಡಾ ವಿತರಿಸಲಾಗುತ್ತಿದೆ.ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಮೊಟ್ಟೆ ವಿತರಣೆಗೆ ಕೈಜೋಡಿಸಿದ್ದು ಇದಕ್ಕಾಗಿ ₹1,500 ಕೋಟಿ ನೆರವನ್ನು ನೀಡಿದೆ.

ಸೆಪ್ಬಂಬರ್ 25ರಿಂದ ಈ ಒಂದು ಯೋಜನೆ ಆರಂಭವಾಗಿದೆ.ಅನುಷ್ಠಾನ ಕುರಿತಂತೆ ಫೌಂಡೇಷನ್‌ ಈಚೆಗೆ ಮೌಲ್ಯಮಾಪನ ನಡೆಸಿತ್ತು ನಾಲ್ಕು ವಿಭಾಗಗಳ 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳು ಈವರೆಗೂ ಮೊಟ್ಟೆ ವಿತರಿಸದಿರುವುದನ್ನು ಪತ್ತೆಯಾಗಿದೆ.

ಫೌಂಡೇಷನ್‌ ಪ್ರತಿನಿಧಿಗಳು ಸಿದ್ಧಪಡಿಸಿದ ಅಧ್ಯಯನ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಬಿಇಒಗಳು ಹಾಗೂ ಪಿ.ಎಂ. ಪೋಷಣ್‌ ಅಭಿಯಾನದ 48 ಸಹಾಯಕ ನಿರ್ದೇಶಕರೂ ಸೇರಿ 98 ಅಧಿಕಾರಿ  ಗಳಿಗೆ ನೋಟಿಸ್‌ ನೀಡಲಾಗಿದೆ.ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು,

ದೈಹಿಕ ಆರೋಗ್ಯದ ಬೆಳವಣಿಗೆಗೆ ಉತ್ತೇಜಿಸಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಆರಂಭಿಸ ಲಾಗಿದೆ. ಅಜೀಂ ಪ್ರೇಮ್‌ಜಿ ಫೌಂಡೇಷನ್‌ ನೆರವು ನೀಡುತ್ತಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆ ಯಶಸ್ಸಿಗೆ ಶ್ರಮಿಸಬೇಕಾದ ಅಧಿಕಾರಿಗಳಿಂದ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ ಅಂಥವರ ವಿರುದ್ಧ ಶಿಸ್ತುಕ್ರಮ ಅನಿವಾರ್ಯ’ ಎಂದು ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಅವರು ಹೇಳಿ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

ಕೆಲ ಶಾಲೆಗಳಲ್ಲಿ ಬೇಯಿಸಿದ ಮೊಟ್ಟೆಗೆ ಮಕ್ಕಳು ಬೇಡಿಕೆ ಸಲ್ಲಿಸಿದ್ದರೂ, ಅಂತಹ ಮಕ್ಕಳಿಗೆ ಮೊಟ್ಟೆ ನೀಡದೆ ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ ಎಂದು ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಪ್ರತಿ ನಿಧಿಗಳು ಸಿದ್ಧಪಡಿಸಿದ ಮೌಲ್ಯಮಾಪನ ಅಧ್ಯಯನ ವರದಿ ಹೇಳಿದೆ. ಚಿಕ್ಕಿ, ಬಾಳೆಹಣ್ಣನ್ನೇ ಹೆಚ್ಚು ಸೇವಿಸುವ ಮಕ್ಕಳಿರುವ ಕೆಲ ಶಾಲೆಗಳಲ್ಲಿ ಶೇ 30ಷ್ಟು ಮಕ್ಕಳು ಚಿಕ್ಕಿ, ಬಾಳೆ ಹಣ್ಣಿಗೆ ಬೇಡಿಕೆ ಸಲ್ಲಿಸಿದ್ದಾರೆ. ಆದರೂ, ಅವರಿಗೆ ಮೊಟ್ಟೆ ಸಿಗುತ್ತಿಲ್ಲ.

ಅನಿವಾರ್ಯವಾಗಿ ಅವರು ಶಿಕ್ಷಕರು ನೀಡಿದ ಚಿಕ್ಕಿ, ಬಾಳೆಹಣ್ಣನ್ನೇ ಸೇವಿಸುತ್ತಿದ್ದಾರೆ. ನಿಯಮ. ದಂತೆ ಚಿಕ್ಕಿ ಪ್ರಮಾಣ ಪ್ರತಿ ವಿದ್ಯಾರ್ಥಿಗೆ 35 ಗ್ರಾಂನಿಂದ 40 ಗ್ರಾಂ ಇರಬೇಕು. ಬಹುತೇಕ ಶಾಲೆಗಳಲ್ಲಿ ಇದು 30 ಗ್ರಾಂಗಿಂತ ಕಡಿಮೆ ಇದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಮೊದಲ ಆದ್ಯತೆಯಾಗಿ ಬಾಳೆಹಣ್ಣು ನೀಡಬೇಕು.

ಆದರೂ, ಕೇವಲ ಚಿಕ್ಕಿ ನೀಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.ಮಕ್ಕಳು ಕೇಳಿದರೂ ಮೊಟ್ಟೆ ಕೊಡುತ್ತಿಲ್ಲಎಂದು ಉಲ್ಲೇಖ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk