ಶಿಕ್ಷಕರ ವೇತನದ 2ನೇ ಅನುದಾನ ವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ವೇತನದ ಬಿಲ್ಲುಗಳನ್ನು ಖಜಾನೆ ಗೆ ಸಲ್ಲಿಸಲು ಸೂಚನೆ…..

Suddi Sante Desk

ಬೆಂಗಳೂರ –

2022-23ನೇ ಸಾಲಿಗೆ ಸಮಗ್ರ ಶಿಕ್ಷಣ – ಕರ್ನಾಟಕ ಯೋಜನೆಯ ಅಡಿಯಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ವೇತನಕ್ಕಾಗಿ ಎರಡನೇ ತ್ರೈಮಾಸಿಕ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶವನ್ನು ಮಾಡಿದೆ

ಈ ಕುರಿತು ಸಮಗ್ರ ಶಿಕ್ಷಣ-ಕರ್ನಾಟಕದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.2022-23ನೇ ಸಾಲಿಗೆ ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಕರ,ಡಿವೈಪಿಸಿಸಿ,ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನಕ್ಕಾಗಿ 2022-23ನೇ ಸಾಲಿಗೆ ನಿಗದಿಪಡಿಸಲಾಗಿರುವ ಅನುದಾನದಲ್ಲಿ ಎರಡನೇ ತ್ರೈಮಾಸಿಕ ವೇತನ ಅನುದಾನದಲ್ಲಿ ಜೂನ್-2022 ಮತ್ತು ಜುಲೈ-2022 ವೇತನಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಲ್ಲೇಖ ಮಾಡಿ ಆದೇಶವನ್ನು ಮಾಡಿದ್ದಾರೆ.

ಸಮಗ್ರ ಶಿಕ್ಷಣ-ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.