ಶಿಕ್ಷಕರಿಗೆ ನೊಟೀಸ್ ವಿದ್ಯಾರ್ಥಿ ನಿಯ ಮೇಲೆ ಹಲ್ಲೆ ಮಾಡಿದ ಆರೋಪ ಸೂಕ್ತ ಕ್ರಮಕ್ಕೆ ಸೂಚನೆ

Suddi Sante Desk

ಕಲಬುರ್ಗಿ –

ಕಲಬುರ್ಗಿಯ ಕಾಳಗಿ ತಾಲ್ಲೂಕಿನ ರೇವಗ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯ ಸರಿಯಾಗಿ ಮಾಡಿಲ್ಲ ಎಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಪ್ರಾಚಾರ್ಯ ಮರೆಪ್ಪ ಸುರಪುರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರಗೆ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.ಹಲ್ಲೆ ನಡೆಸಿದ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನಲೆ ಯಲ್ಲಿ ಸ್ಥಳಕ್ಕೆ ದೌಡಾಯಿಸಿದ ರಮೇಶ ಸಂಗಾ ಅವರು ಶಾಲೆಯ ಪ್ರಾಚಾರ್ಯರು ಹಾಗೂ ವಿದ್ಯಾರ್ಥಿನಿಗೆ ಥಳಿಸಿ ರುವ ಆರೋಪ ಎದುರಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರ ಅವರನ್ನು ವಿಚಾರಣೆಗೊಳಪಡಿ ಸಿದರು‌

ಅಲ್ಲದೇ, ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಥಳಿತಕ್ಕೊಳಗಾದ ವಿದ್ಯಾರ್ಥಿನಿಯನ್ನು ಪೋಷಕರು ತಮ್ಮ ಊರಿಗೆ ಕರೆದುಕೊಂಡು ಹೋಗಿದ್ದರು.ಅವರ ಪೋಷಕ ರಿಗೆ ಕರೆ ಮಾಡಿ ಮಾಹಿತಿ ಪಡೆದರು.ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು. ಹೀಗಾಗಿ, ಶಾಲೆಗೆ ಮಗಳನ್ನು ತಂದು ಬಿಡುವಂತೆ ಮನವೊಲಿಸಿದರು.ಶಾಲೆಯಲ್ಲಿರುವ ವಿದ್ಯಾರ್ಥಿನಿಯರು ಮಲ್ಕಪ್ಪ ಅವರು ಹಲ್ಲೆ ನಡೆಸಿದ ಬಗ್ಗೆ ಮಾಹಿತಿ ನೀಡಿದರು.ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಂಗಾ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದರು.ಎರಡು ದಿನಗಳ ಒಳಗಾಗಿ ಸಮಜಾಯಿಷಿ ನೀಡುವಂತೆ ತಿಳಿಸಿದ್ದಾ ರೆ ಇನ್ನೂ ಪ್ರಮುಖವಾಗಿ ವಿದ್ಯಾರ್ಥಿನಿಗೆ ಮಲ್ಲಪ್ಪ ಬಿರಾದಾರ ಥಳಿಸಿರುವುದು ದೃಢಪಟ್ಟಿದೆ.ಹೀಗಾಗಿ, ಅವರನ್ನು ಶಾಲೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲು ಕೇಂದ್ರ ಕಚೇರಿಗೆ ಶಿಫಾರಸು ಮಾಡಲಾಗುವುದು ಎಂದು ಕ್ರೈಸ್ ಜಿಲ್ಲಾ ಸಂಯೋಜಕ ಶಿವರಾಮ ಚವ್ಹಾಣ ತಿಳಿಸಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.