ಬೆಂಗಳೂರು –
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಟಿಪ್ಪಣಿಯ ಮೂಲಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಯವರಿಗೆ ಈ ಒಂದು ಕುರಿತಂತೆ ಸಂದೇಶ ನೀಡಿದ್ದಾರೆ.
ಮುಂದಿನ ಸೂಚನೆಯವರೆಗೆ ಮುಖ್ಯಮಂತ್ರಿ ಯವರ ಸಚಿವಾಲಯಕ್ಕೆ ಯಾವುದೇ ಪೈಲ್ ಗಳನ್ನು ಮಂಡಿಸದಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಟಿಪ್ಪಣೆಯೊಂದನ್ನು ಬರೆದು ಮಾಹಿತಿ ನೀಡಿದ್ದಾರೆ.ಇನ್ನೂ ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಯಾವುದೇ ತೊಂದರೆಯಾಗೊದಿಲ್ಲ ಅದೇ ಬೇರೆ ಇನ್ನೂ ಇಲಾಖೆಯ ಬೇರೆ ಬೇರೆ ಹುದ್ದೆಗಳ ವರ್ಗಾವಣೆ ಕುರಿತಂತೆ ಈ ಒಂದು ಸಂದೇಶ ಅನ್ವಯವಾಗಲಿದೆ.
ಸುದ್ದಿ ಸಂತೆ ನ್ಯೂಸ್…..