ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ CM ವಿಶ್ವಾಸ ಹಿಂಸಾಚಾರ ಕುರಿತು ಪೊಲೀಸರಿಗೆ ಕೊಟ್ಟರು ಖಡಕ್ ಸಂದೇಶ…..

Suddi Sante Desk

ಹುಬ್ಬಳ್ಳಿ –

ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸ ಲಿದ್ದಾರೆ ಎಂದರು.

ಇನ್ನೂ ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ.ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ತಿಳಿಸಲಾಗಿದ್ದು ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರ ಜೊತೆಗೆ ಚರ್ಚೆ ಮಾಡಿ ದ್ದೇನೆ ಎಂದರು.

ಇನ್ನೂ ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್‌ ದಾಳಿ ನಡೆದಿ ರುವುದು ದುರದೃಷ್ಟಕರ ವಿಚಾರ.ಅಂತವರ ಮೇಲೆ ನಿರ್ದಾ ಕ್ಷಿಣ್ಯವಾಗಿ ಕಠಿಣ ಕಾನೂನು ಕೈಗೊಳ್ಳಲು ಚಿಂತಿಸಲಾಗಿದೆ ಉತ್ತರ ಪ್ರದೇಶದಂತ ಘಟನೆಗಳು ನಮ್ಮಲ್ಲಿ ನಡೆದಿಲ್ಲ ನಮ್ಮ ರಾಜ್ಯ ಶಾಂತವಾಗಿದೆ.ಶೂಟ್ ಆ್ಯಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ.ಇತ್ತ ರಾಯಚೂರು ಕಲು ಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ.ಈ ಘಟನೆಗೆ ಸಂಬಂಧಿ ಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.