ರಾತ್ರೋರಾತ್ರಿ ಬಿಜೆಪಿ ಮುಖಂಡನ ಬಂಧನ – ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ

Suddi Sante Desk

ಚಿಕ್ಕಬಳ್ಳಾಪುರ –

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ‌.

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಬಂಧಿಸಲಾಗಿದೆ‌. ಈವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಭ್ರಮರವಾಸಿನಿ ಕ್ರಷರ್ಸ್ ಮಾಲೀಕ ಜಿ.ಎಸ್. ನಾಗರಾಜ್ ಹಾಗೂ ಸ್ಪೋಟಕ ಸರಬರಾಜು ಮಾಡಿದ ಮತ್ತೋರ್ವ ಆರೋಪಿ ಗಣೇಶ್ ಎಂಬುವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ನಂತರ ಆರೋಪಿಗಳು ಪರಾರಿಯಾಗಿದ್ದರು.

ದುರಂತದಲ್ಲಿ 6 ಮಂದಿ ಮೃತಪಟ್ಟಿದ್ದು, ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಗುಡಿಬಂಡೆ ಪಿಎಸ್‌ಐ,ಪಿಐ ಅವರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಇವೆಲ್ಲದರ ನಡುವೆ ಮತ್ತೊಂದು ಕಡೆ ಪ್ರಕರಣವನ್ನು ಸಿಐಡಿ ತನಿಖೆ ಗೆ ವಹಿಸಲಾಗಿದೆ ಆರಂಭಗೊಂಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.