ಸರ್ಕಾರಿ ಶಾಲೆಯಲ್ಲಿ ಪೋಷಕರ ಪ್ರತಿಭಟನೆ – ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದ ಪೋಷಕರು ಸ್ಥಳಕ್ಕೆ ಇಲಾಖೆಯ ಅಧಿಕಾರಿಗಳು…..

Suddi Sante Desk
ಸರ್ಕಾರಿ ಶಾಲೆಯಲ್ಲಿ ಪೋಷಕರ ಪ್ರತಿಭಟನೆ – ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದ ಪೋಷಕರು ಸ್ಥಳಕ್ಕೆ ಇಲಾಖೆಯ ಅಧಿಕಾರಿಗಳು…..

ತುಮಕೂರು

ಸರ್ಕಾರಿ ಶಾಲೆಯಲ್ಲಿ ಪೋಷಕರ ಪ್ರತಿಭಟನೆ – ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದ ಪೋಷಕರು ಸ್ಥಳಕ್ಕೆ ಇಲಾಖೆಯ ಅಧಿಕಾರಿ ಗಳು ಹೌದುವಿ ದ್ಯಾರ್ಥಿನಿಯರೊಂದಿಗೆ ಶಿಕ್ಷಕ. ರೊಬ್ಬರು ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಇನ್ನೂ ಈ ಒಂದು ವಿಚಾರವನ್ನು ತಿಳಿದ ಪೋಷಕರು ಶಾಲೆಗ ಆಗಮಿಸಿ ಪ್ರತಿಭಟನೆ ಮಾಡಿದರು ಅಲ್ಲದೇ ಶಿಕ್ಷಕನನ್ನು ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ರಂಟವಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಒಂದು ಪ್ರತಿಭಟನೆ ನಡೆದಿದೆ.ಶಾಲೆ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಬೇಡಿಕೆಗಳಿ ಗಾಗಿ ಪಟ್ಟು ಹಿಡಿದರು.ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ರಂಟವಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಾಗಿ ದ್ದು ಮದ್ಯ ಸೇವಿಸಿ ಶಾಲೆಗೆ ಹಾಜರಾಗುತ್ತಾರಂತೆ ಶಿಕ್ಷಕ.ಶಿಕ್ಷಕ ಲಕ್ಷ್ಮೀ ಕಾಂತ್ ವಿರುದ್ಧ ಗ್ರಾಮಸ್ಥರು ಆರೋಪವನ್ನು ಮಾಡಿದ್ದಾರೆ

ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತಿಸುತ್ತಿದ್ದಾನಂತೆ ಶಿಕ್ಷಕ.ಮಕ್ಕಳಿಗೆ ಹಣದ ಆಮಿಷ ತೋರಿಸುವುದು.ನಾನು ನಿಮ್ಮ ತಂದೆ ಸ್ನೇಹಿತರೆಂದು ಹೇಳಿ ಮಕ್ಕಳ ದೇಹವನ್ನು ಸ್ವರ್ಶಿ ಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.ಇನ್ನೂ ಈ ಒಂದು ವಿಚಾರವನ್ನು ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.ಇನ್ನೂ ಬಿ.ಆರ್.ಸಿ ಯವರನ್ನು ಕೂಡಾ ತರಾಟೆಗೆ ತೆಗೆದು ಕೊಂಡ ಪ್ರತಿಭಟನಾಕಾರರು ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯವನ್ನು ಮಾಡಿದರು.

ಸುದ್ದಿ ಸಂತೆ ನ್ಯೂಸ್ ತುಮಕೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.