ಧಾರವಾಡ –
ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಹೌದು ಮಧು ಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು.ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು.ಜುಲೈ 24 ರಂದು ಮೃತಪಟ್ಟಿದ್ದಾರೆ.
.
ಇನ್ನೂ ಈ ಒಂದು ಪ್ರಕರಣದಿಂದಾಗಿ ಜಿಲ್ಲೆಯ ಜನತೆ ಸಾಮಾಜಿಕ ಅಂತರ,ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸ ಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.