ಬೆಂಗಳೂರು –
ರಾಜ್ಯದಲ್ಲಿ ಪರೀಕ್ಷೆ ನಡೆಸದೆಯೇ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವ ಸಂಬಂಧ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಸ್.ವಿ.ಸಿಂಗೇಗೌಡ ಅರ್ಜಿ ಸಲ್ಲಿಸಿ ದ್ದಾರೆ.ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಸಧ್ಯ ಅರ್ಜಿಯನ್ನು ಸಲ್ಲಿಸಲಾಗಿದ್ದು ವಿಚಾರಣೆಗೆ ಬರಬೇಕಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು
