ಶಾಲಾ ಮಟ್ಟದ ಕ್ರೀಡಾಕೂಟದಲ್ಲಿ ಚಾಕು ಇರಿತ – ಎರಡು ಗುಂಪುಗಳು ನಡುವೆ ಪೈಟ್ ಗಲಾಟೆ…..

Suddi Sante Desk

ದಾವಣಗೆರೆ –

ಶಾಲಾ ಮಟ್ಟದ ಸ್ಪೋರ್ಟ್ಸ್ ನಡೆಯುವಾಗ 2 ಗುಂಪುಗಳ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕರೆಕಟ್ಟೆ ಗ್ರಾಮದಲ್ಲಿ ನಡೆದಿದೆ.ಚನ್ನಗಿರಿ ತಾಲೂಕಿನ ಕರೆಕಟ್ಟೆ ಗ್ರಾಮದಲ್ಲಿ ಶಾಲಾ ಮಟ್ಟದ ಸ್ಪೋರ್ಟ್ಸ್ ನಡೆಯುತ್ತಿದ್ದ ವೇಳೆ ಯುವತಿಯರಿಗೆ ಚುಡಾ ಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಚಿರಡೋಣಿ ಗ್ರಾಮದ ದೇವೇಂದ್ರ ಹಾಗೂ ಸುನೀಲ್ ಎಂಬುವರಿಗೆ ಚಾಕು ಇರಿಯಲಾಗಿದೆ.ಸದ್ಯ ಇವರನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿ ರಾಘವೇಂದ್ರನನ್ನು ಪೊಲೀ ಸರು ವಶಕ್ಕೆ ಪಡೆದಿದ್ದಾರೆ.ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.