ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ – ಆಸ್ಪತ್ರೆ ಗೆ ಹೋಗುವ ದಾರಿ ಮಧ್ಯದಲ್ಲಿ ನಿಧನರಾದ ಪೊಲೀಸ್ ಪೇದೆ…..

Suddi Sante Desk
ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ – ಆಸ್ಪತ್ರೆ ಗೆ ಹೋಗುವ ದಾರಿ ಮಧ್ಯದಲ್ಲಿ ನಿಧನರಾದ ಪೊಲೀಸ್ ಪೇದೆ…..

ಯಾದಗಿರಿ

ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ – ಆಸ್ಪತ್ರೆ ಗೆ ಹೋಗುವ ದಾರಿ ಮಧ್ಯದಲ್ಲಿ ನಿಧನರಾದ ಪೊಲೀಸ್ ಪೇದೆ ಹೌದು ಪೊಲೀಸ್ ಕಾನ್ಸ್ ಟೇಬಲ್‌ ರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್ ಟೇಬಲ್ ದೇವೇಂದ್ರಪ್ಪ (40) ಮೃತರಾದವರಾಗಿದ್ದಾರೆ.ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ ಬಾಧಿಸು ತ್ತಿದ್ದ ಕಾರಣ ಜೂನ್ ನಿಂದ ರಜೆಯಲ್ಲಿದ್ದರು.

ಹೀಗಾಗಿ ಬುಧವಾರ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವ ಸಂದರ್ಭ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆ ಯುಸಿರೆಳೆದಿದ್ದಾರೆ.ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸು ತ್ತಿದ್ದರು.

ಸುದ್ದಿ ಸಂತೆ ನ್ಯೂಸ್ ಯಾದಗಿರಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.