ಪೊಲೀಸ್ ಪೇದೆ ಸತೀಶ್ ಇಮ್ಮಡಿ ನಿಧನ – ದಕ್ಷ ಪೊಲೀಸ್ ಸಿಬ್ಬಂದಿಯನ್ನು ಕಳೆದುಕೊಂಡ ಹುಬ್ಬಳ್ಳಿ ಧಾರವಾಡ ಪೊಲೀಸ್ ಇಲಾಖೆ…..

Suddi Sante Desk

ಧಾರವಾಡ –

1996 ರ ಪೊಲೀಸ್ ಸಿಬ್ಬಂದಿ ಸತೀಶ್ ಇಮ್ಮಡಿ ನಿಧನ ರಾಗಿದ್ದಾರೆ.ಹೌದು ಸಧ್ಯ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ಮಾಡುತ್ತಿದ್ದ ಇವರು ಇತ್ತೀಚಿಗೆ ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿಯನ್ನು ಪಡೆದುಕೊಂಡಿದ್ದರು.ಈ ಹಿಂದೆ ಧಾರವಾಡದ ಉಪನಗರ ಸಂಚಾರಿ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ಮಾಡಿ ಸಾಕಷ್ಟು ಪ್ರಮಾಣದಲ್ಲಿ ಜನಸ್ನೇಹಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯವನ್ನು ಮಾಡಿದ ಕೀರ್ತಿ ಸತೀಶ್ ಇಮ್ಮಡಿಯವರಿಗೆ ಸಲ್ಲುತ್ತದೆ.

ಇಲಾಖೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಸಿಬ್ಬಂದಿಯಾಗಿ ಸಾಕಷ್ಟು ಹೆಸರನ್ನು ಮಾಡಿದ್ದ ಇವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದರು.ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಧಾರವಾಡದ ನಿವಾಸ ದಲ್ಲಿ ನಿಧನರಾಗಿದ್ದಾರೆ.ಸಧ್ಯ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತರ ಸ್ವಂತ ಊರು ಹಾವೇರಿಗೆ ಪಾರ್ಥಿವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದ್ದ ಇನ್ನೂ ಮೃತರಾದ ಇವರಿಗೆ ಪೊಲೀಸ್ ಆಯುಕ್ತರು ಡಿಸಿಪಿ ಅಧಿಕಾರಿಗಳು ಸೇರಿದಂತೆ ಅವಳಿ ನಗರದ ಪೊಲೀಸ್ ಅಧಿಕಾರಿಗಳು ಮತ್ತು ವಿದ್ಯಾಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ವ ಸಿಬ್ಬಂದಿಗಳು ಸಂತಾಪವನ್ನು ಸೂಚಿಸಿ ಭಾವ ಪೂರ್ಣ ನಮನ ಸಲ್ಲಿಸಿ ಸಂತಾಪವನ್ನೂ ಸೂಚಿಸಿದ್ದಾರೆ. ಅಂತ್ಯಕ್ರಿಯೆ ಹಾವೇರಿಯಲ್ಲಿ ನಡೆಯಲಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.