ಪೊಲೀಸ್ ಪೇದೆ ಆತ್ಮಹತ್ಯೆ – 2012ರ ಬ್ಯಾಚ್ ನ ಪ್ರಶಾಂತ ನೇಣು ಹಾಕಿಕೊಂಡು ಆತ್ಮಹತ್ಯೆ…..

Suddi Sante Desk
ಪೊಲೀಸ್ ಪೇದೆ ಆತ್ಮಹತ್ಯೆ – 2012ರ ಬ್ಯಾಚ್ ನ ಪ್ರಶಾಂತ ನೇಣು ಹಾಕಿಕೊಂಡು ಆತ್ಮಹತ್ಯೆ…..

ಗದಗ  –

ಕೌಟುಂಬಿಕ‌ ಕಲಹದಿಂದ ಬೇಸತ್ತು ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಲ್ಲಿ ನಡೆದಿದೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹನುಮ ನಾಳ ಗ್ರಾಮದ ಪ್ರಶಾಂತ ಕಂಚೇರಿ (33) ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರ ಬ್ಯಾಚ್ ನ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆಯ ಪೊಲೀಸ್ ಕಾನ್ಸಟೇಬಲ್ ಆಗಿ, ಸದ್ಯ (ASC) ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸವಾಗಿದ್ದ ಪ್ರಶಾಂತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಕೆಲಸದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದ ಪ್ರಶಾಂತ, ಸಾವಿಗೆ ಶರಣಾಗಿರು ವದು ಅವರ ಸ್ನೇಹಿತರ ಬಳಗಕ್ಕೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಆಘಾತ ಉಂಟು‌ ಮಾಡಿದೆ.

ಪತ್ನಿ ಹಾಗೂ ಮಗುವನ್ನು ಅಗಲಿರೋ ಪ್ರಶಾಂತ ಸಾವಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು‌ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳೆಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಗದಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.