ಪಾಲಿಕೆಯ ಆಯುಕ್ತರ,ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಸಂತೋಷ ಲಾಡ್ – ಹುಬ್ಬಳ್ಳಿಯಲ್ಲಿ ನಡೆಯಿತು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ…..

Suddi Sante Desk
ಪಾಲಿಕೆಯ ಆಯುಕ್ತರ,ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಸಂತೋಷ ಲಾಡ್ – ಹುಬ್ಬಳ್ಳಿಯಲ್ಲಿ ನಡೆಯಿತು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ…..

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ ಹುಬ್ಬಳ್ಳಿ ಯಲ್ಲಿ ನಡೆಯಿತು ಕಾರ್ಮಿಕ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ನಗರದ ಐಟಿ ಪಾರ್ಕ್‌‌ನಲ್ಲಿರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಸಭಾಂಗಣದಲ್ಲಿ ಸಭೆ ನಡೆಯಿತು.ಇದೇ ವೇಳೆ ಮಾತನಾಡಿದ ಅವರು ಪಾಲಿಕೆಯಲ್ಲಿ ಆಯುಕ್ತರು ಒಳ್ಳೆಯ ಕೆಲಸ ಕಾರ್ಯ ಗಳನ್ನು ಮಾಡುತ್ತಿದ್ದು  ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು

ಬೆಂಗಳೂರು ನಗರದಂತೆ ಹುಬ್ಬಳ್ಳಿ ಧಾರವಾಡ ನಗರ ಗಳು ಬೆಳವಣಿಗೆ ಹೊಂದುತ್ತಿವೆ. ಅವಳಿ ನಗರಗಳ ಬೆಳವಣಿಗೆಗೆ ಅಧಿಕಾರಿಗಳು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಲ್ಲದೇ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕಾರ್ಯ ನಿರ್ವಹಿ ಸಬೇಕು ಎಂದರು.

ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ 25 ವರ್ಷಗಳಲ್ಲಿ ನಗರ ಗಳು ಹೇಗೆ ಬೆಳವಣಿಗೆ ಆಗಬೇಕು ಎಂಬುದನ್ನು ಅರಿತುಕೊಂಡು ಉತ್ತಮ ಯೋಜನೆಗಳನ್ನು ರೂಪಿಸ ಬೇಕಿದೆ. ಬೆಂಗಳೂರು ನಗರಕ್ಕೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಅವಳಿ ನಗರಗಳು ಅಭಿವೃದ್ಧಿ ಆಗಬೇಕು. ಆಧುನಿಕ ವಿಜ್ಞಾನ ತಂತ್ರಜ್ಞಾನವನ್ನು ಉತ್ತಮ ರೀತಿ ಯಲ್ಲಿ ಬಳಸಿಕೊಳ್ಳಲು ಮುಂದಾಗಬೇಕಿದೆ.

ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಕಾರ್ಯ ರೂಪಕ್ಕೆ ತರಲು ಯತ್ನಿಸಬೇಕು. ಆನ್‌‌ಲೈನ್ ವ್ಯವಸ್ಥೆ, ಹೊಸ ತಂತ್ರಜ್ಞಾನ ಮತ್ತು ನವೀನ ಕಲ್ಪನೆಯ ಯೋಜನೆ ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಘನ ತ್ಯಾಜ್ಯ ನಿರ್ವಹಣೆ ಘಟಕಗಳಿಗೆ ಕಾಂಪೌಂಡ್ ನಿರ್ಮಿಸಬೇಕು. ಸರ್ಕಾರಿ ಉದ್ಯಾನಗಳನ್ನು ಕೈಗಾರಿ ಕೋದ್ಯಮಿಗಳು ಹಾಗೂ ಎನ್‌‌ಜಿಒಗಳಿಗೆ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಬೇಕಾಗಿದೆ. ಸಾರ್ವಜನಿ ಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದರು.

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಯಲ್ಲಿ ಚಿಟಗುಪ್ಪಿ ಹಾಗೂ ಮೇದಾರ ಓಣಿಯ ಆಸ್ಪತ್ರೆ ಗಳನ್ನು ನಿರ್ಮಿಸಲಾಗಿದೆ. ತೋಳನಕೆರೆ, ಉಣಕಲ್ ಕೆರೆ ಹಾಗೂ ಮಹಾತ್ಮ ಗಾಂಧಿ ಪಾರ್ಕ್ ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿದೆ. ಜನತಾ ಬಜಾರ್ ಮಾರಾಟ ಮಳಿಗೆಯಲ್ಲಿ ಮೊದಲಿನ ವ್ಯಾಪಾರ ಸ್ಥರಿಗೆ ಅನುಕೂಲ ಮಾಡಿ ಕೊಡುವ ಕುರಿತು ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ರುದ್ರೇಶ ಗಾಳಿ ಸಭೆಗೆ ತಿಳಿಸಿದರು.

ಬಿಲ್ ಕಲೆಕ್ಟರ್ ಗಳು ವಲಯವಾರು ಆಸ್ತಿಗಳನ್ನು ಸರಿಯಾಗಿ ಗುರುತಿಸಿ, ಆಸ್ತಿ ತೆರಿಗೆಯನ್ನು ಸಂಗ್ರಹಿಸ ಬೇಕು. 1,81,148 ವಸತಿ ಆಸ್ತಿಗಳು, 34,798 ವಾಣಿಜ್ಯ ಆಸ್ತಿಗಳು ಹಾಗೂ 1,22,656 ಖಾಲಿ ಪ್ರದೇಶಗಳು ಸೇರಿ ಒಟ್ಟಾರೆ 3,38,602 ಆಸ್ತಿಗಳು ಪಾಲಿಕೆಗೆ ಒಳಪಡುತ್ತವೆ. ಒಟ್ಟು 2,744 ಬಾಡಿಗೆ ಪ್ರದೇಶಗಳಲ್ಲಿ, 1649 ಬಾಡಿಗೆ ಪ್ರದೇಶಗಳನ್ನು ಗುರುತಿಸಲಾಗಿದೆ.

ಇನ್ನೂ 1,095 ಪ್ರದೇಶಗಳನ್ನು ಗುರುತಿಸುವುದು ಬಾಕಿಯಿವೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ‌ಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕ್ರೋಢೀಕರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಮಹಾಪೌರರಾದ ರಾಮಣ್ಣ ಬಡಿಗೇರ, ಉಪಮಹಾಪೌ ರರಾದ ದುರ್ಗಮ್ಮ ಬೀಜವಾಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.