ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರವಿಲ್ಲ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ – ಪ್ರಹ್ಲಾದ್ ಜೋಶಿ, ಹೈಕಮಾಂಡ್ ನಾಯಕರನ್ನು ನಾನು ಭೇಟಿಯಾಗಿಲ್ಲವೆಂದ ದೂರುದಾರರು…..

Suddi Sante Desk
ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರವಿಲ್ಲ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ – ಪ್ರಹ್ಲಾದ್ ಜೋಶಿ, ಹೈಕಮಾಂಡ್ ನಾಯಕರನ್ನು ನಾನು ಭೇಟಿಯಾಗಿಲ್ಲವೆಂದ ದೂರುದಾರರು…..

ಹುಬ್ಬಳ್ಳಿ

ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪಾತ್ರವಿಲ್ಲ ಅವರನ್ನು ನಾನು ಭೇಟಿಯಾಗಿಲ್ಲ ಎಂದು ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ವಿಚಾರಣೆಯ ಬಳಿಕ ಅವರು ಮಾತನಾಡಿ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ.ಅವರ ಸಹೋದರ ಗೋಪಾಲ್ ಜೋಶಿ ಬಂಧನವಾಗಿದೆ. ನಮಗೆ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇತ್ತು. ಆದರೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ ಆಮಿಷವೊಡ್ಡಿದ್ದರು ಎಂದರು.

ಪ್ರಹ್ಲಾದ್ ಜೋಶಿ, ಹೈಕಮಾಂಡ್ ನಾಯಕರನ್ನು ನಾನು ಭೇಟಿಯಾಗಿಲ್ಲ, ಗೋಪಾಲ್ ಜೋಶಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ. ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.