This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ರಾಜ್ಯದ 21 ಪೊಲೀಸ್ ಅಧಿಕಾರಿ ಗಳಿಗೆ ‘ರಾಷ್ಟ್ರಪತಿ’ ಗೌರವ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದ ಇಬ್ಬರು ಎಡಿಜಿಪಿಗಳು ಸೇರಿದಂತೆ ಒಟ್ಟು 21 ಮಂದಿ ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಯವರ ವಿಶಿಷ್ಟ ಹಾಗೂ ಶ್ಲಾಘನೀಯ ಸೇವಾ ಪದಕ ದೊರೆತಿದೆ. ಜೊತೆಯಲ್ಲಿ ಸಿಐಎಸ್‍ಎಫ್‍ನ ಹಿರಿಯ ಅಧಿಕಾರಿಗೆ ಹಾಗೂ ಅಗ್ನಿಶಾಮಕ ದಳ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೂ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಸಿಐಡಿ ಆರ್ಥಿಕ ಅಪರಾಧಗಳ ಎಡಿಜಿಪಿ ಉಮೇಶ್ ಕುಮಾರ್,ಆಂತರಿಕ ಭದ್ರತೆ ವಿಭಾಗದ ಎಡಿಜಿಪಿ ಅರುಣ್ ಚಕ್ರವರ್ತಿ ಅವರು ಭಾಜರಾಗಿದ್ದಾರೆ. ಶ್ಲಾಘನೀಯ ಸೇವಾ ಪದಕಕ್ಕೆ ಬೆಂಗಳೂರಿನ KSRP 3ನೇ ಬೆಟಾಲಿಯನ್‍ನ ಕಮಾಂಡೆಂಟ್ ಎಂ.ವಿ.ರಾಮಕೃಷ್ಣ ಪ್ರಸಾದ್,ಮಲ್ಲೇಶ್ವರ ಉಪ ವಿಭಾಗದ ಎಸಿಪಿ ಕೆ.ಎಸ್.ವೆಂಕಟೇಶ್ ನಾಯ್ಡು ಚಿಕ್ಕಪೇಟೆ ಉಪವಿಭಾಗದ ಎಸಿಪಿ ರವಿ.ಪಿ,ರಾಜ್ಯ ಗುಪ್ತವಾರ್ತೆ ವಿಭಾಗದ ಡಿವೈಎಸ್ಪಿ ನವೀನ್ ಕುಲಕರ್ಣಿ ದಕ್ಷಿಣ ವಿಭಾಗದ ತಲ್ಲಘಟ್ಟಪುರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಜಿ.ಸಿದ್ದರಾಜು,

ಎಸಿಬಿ ಇನ್ಸ್ಪೆಕ್ಟರ್ ಎನ್.ಜೆ.ದಯಾನಂದ್, ಕಲಬುರಗಿ ಗ್ರಾಮಾಂತರ ವೃತ್ತದ ಸಿಪಿಐ ಶಂಕರ ಗೌಡ ಪಾಟೀಲ್,ಬೆಳಗಾವಿಯ KSRP ತರಬೇತಿ ಶಾಲೆಯ ವಿಶೇಷ ಆರ್ ಎಸ್‍ಐ ಎಸ್.ಬಿ.ಮಾಳಗಿ, ರಾಜ್ಯ ಗುಪ್ತವಾರ್ತೆ ವಿಭಾಗದ ಮಹಿಳಾ ಪಿಎಸ್‍ಐ ಎಸ್.ಇ.ಗೀತಾ,KSRP 3ನೇ ಬೆಟಾಲಿಯನ್‍ನ ವಿಶೇಷ ಎಆರ್ ಎಸ್‍ಐ ಬಿ.ಎಸ್. ಗೋವರ್ಧನ ರಾವ್, ಮಂಗಳೂರು ನಗರದ ಸೈಬರ್ ಅಪರಾಧ ಗಳ ಠಾಣೆಯ ಎಎಸ್‍ಐ ಮೋಹನ್, ಬೆಂಗಳೂರಿನ ವೈರ್‍ಲೆಸ್ ವಿಭಾಗದ ಎಎಸ್‍ಐ ರಾಮನಾಯಕ್,

ತುಮಕೂರಿನ ಜಯನಗರ ಪೊಲೀಸ್ ಠಾಣೆಯ ಹೆಡ್‍ಕಾನ್‍ಸ್ಟೆಬಲ್ ಮೊಹಮ್ಮದ್ ಮುನಾವರ್ ಪಾಷಾ, ಬೆಂಗಳೂರಿನ KDRP 4ನೇ ಬೆಟಾಲಿಯ ನ್‍ನ ವಿಶೇಷ ಆರ್ ಎಚ್‍ಸಿ ಎಸ್.ಪಿ.ಕೆರುಟಗಿ, ಬಳ್ಳಾರಿ DAR ಎಎಚ್‍ಸಿ ಬಿ.ಎಸ್.ದಾದಾ ಅಮೀರ್ ಯಲಹಂಕ ಎಪಿಟಿಎಸ್‍ನ ಎಎಚ್‍ಸಿ ವಿ.ಸೋಮಶೇಖರ್ ಚಿಕ್ಕಮಗಳೂರು ಕಂಪ್ಯೂಟರ್ ವಿಭಾಗದ ಸಿಎಚ್‍ಸಿ ಆರ್.ಕುಮಾರ್, ಬೆಂಗಳೂರು KSRP 3ನೇ ಬೆಟಾಲಿಯನ್ ವಿಶೇಷ ಆರ್ ಎಚ್‍ಸಿ ಸಯ್ಯದ್ ಅಬ್ದುಲ್ ಖಾದರ್,ಹುಬ್ಬಳ್ಳಿ ಧಾರವಾಡದ ಸಿಸಿಆರ್‍ಬಿಯ ಸಿಎಚ್‍ಸಿ ಗೋಪಾಲ ದೇವೇಂದ್ರಪ್ಪ ಕೊಟಬಾಗಿ ಅವರಿಗೆ ಪ್ರಶಸ್ತಿ ಸಂದಿವೆ.

ಮಂಗಳೂರಿನ ಸಿಐಎಸ್‍ಎಫ್‍ನ ಸಹಾಯಕ ಕಮಾಂಡೆಂಟ್ ಸಂತೋಷ್‍ಕುಮಾರ್.ಪಿ ಅವರಿಗೂ ಶ್ಲಾಘನೀಯ ಸೇವಾ ಪದಕ ದೊರೆತಿದೆ.

ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಪಡೆಯ ವಿಶೇಷ ಪದಕಕ್ಕೆ ಕರ್ನಾಟಕದ ಗೃಹ ರಕ್ಷಕ ದಳದ ಕಮಾಂಡೆಂಟ್ ಅಜ್ಮಲ್ ಸಾಕೀಬ್ ಮೊಹಮ್ಮದ್, ಫ್ಲಟೂನ್ ಕಮಾಂಡರ್ ಳಾದ ಸುಜೇಂದ್ರ ಕುಮಾರ್ ನಾರೇಪ್ಪ ಸಿ,ಜಗನ್ನಾಥ್ ಕರಿಯಪ್ಪ,ವಿಶೇಷ ಫ್ಲಟೂನ್ ಕಮಾಂಡರ್ ನಿಂಬಣ್ಣಗೌಡ,ನಾಗರಿಕ ರಕ್ಷಣಾ ಪಡೆಯ ವಿಭಾಗೀಯ ವಾರ್ಡನ್‍ಗಳಾದ ರಾಜೇಶ್ ಶಂಕರನಾರಾಯಣ ಮಾಕಂ,ಮೋಹನ್ ಕೃಷ್ಣಪ್ಪ ಅವರು ಭಾಜನರಾಗಿದ್ದಾರೆ.

ಅಗ್ನಿಶಾಮಕ ದಳದ ಫೈರ್ ಸ್ಟೇಷನ್ ಆಫೀಸರ್ ಬಿ.ಪಿ.ಕೃಷ್ಣಪ್ಪ, ಸಹಾಯಕ ಅಗ್ನಿಶಾಮಕ ಅಧಿಕಾರಿ ಚಿದಾನಂದ ದುಂಡಪ್ಪ ಮಾನೆ, ಮುಂಚೂಣಿ ಅಗ್ನಿಶಾಮಕ ಸಿಬ್ಬಂದಿ ಮೀರ್ ಮೊಹಮ್ಮದ್ ಗೌಸ್, ಚಾಲಕರುಗಳಾದ ಕೆ.ಆರ್.ಮಂಜುನಾಥ್, ಪ್ರಶಾಂತ್‍ಕುಮಾರ್ ಅವರುಗಳು ರಾಷ್ಟ್ರಪತಿ ಅವರ ಶೌರ್ಯ ಪದಕಕ್ಕೆ ಭಾಜನರಾಗಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk