ಕಡಬ –
ಕಾರನ್ನು ಚಲಾಯಿಸುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ಕಳೆದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಡಬದಲ್ಲಿ ನಡೆದಿದೆ.ಪಂಜ ರಸ್ತೆಯ ಮೆಸ್ಕಾಂ ಸಮೀಪ ಈ ಒಂದು ಘಟನೆ ನಡೆದಿದೆ

ಕಡಬದ ಸ.ಪ.ಪೂ.ಕಾಲೇಜಿನ ಉಪನ್ಯಾಸಕ ವಾಸುದೇವ ಕೋಲ್ಪೆಯವರು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೆಸ್ಕಾಂ ಸಮೀಪ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ತಪ್ಪಿದ್ದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆ ಯಲ್ಲಿ ಉಪನ್ಯಾಸಕ ವಾಸುದೇವರವರು ಗಾಯಗೊಂ ಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.