ಬೆಂಗಳೂರು:
ಯಾರಿಗೆ ಆಗಲಿ ರಕ್ಷಣೆ ನೀಡುವುದು, ದೌರ್ಜನ್ಯ ವಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಡಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ನಾನು ಹೇಳಬೇಕಾಗಿರುವುದನ್ನೆಲ್ಲಾ ಸದನದಲ್ಲಿ ಹೇಳಿದ್ದೇನೆ ಎಂದರು.

ಸಂತ್ರಸ್ತ ಯುವತಿಯ ವಿಡಿಯೋ ನಾನು ನೋಡಿಲ್ಲ. ಈಗಷ್ಟೇ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಎಕನಾಮಿಕ್ ಅಫೆನ್ಸ್ ಪ್ರಕರಣದ ವಿಚಾರಣೆ ಇತ್ತು. ಅದಕ್ಕೆ ಹಾಜರಾಗಿ ಈಗಷ್ಟೇ ಬಂದಿದ್ದೇನೆ. ಕಳೆದ ಬಾರಿ ಹೋಗಲು ಆಗಿರಲಿಲ್ಲ. ಹೀಗಾಗಿ ಇವತ್ತು ಹೋಗಿ ಬಂದಿದ್ದೇನೆ. ಈ ವಿಡಿಯೋ ಏನು ಎಂಬುದನ್ನು ನೋಡುತ್ತೇನೆ ಎಂದರು.

ಇನ್ನೂ ಈ ವಿಚಾರದಲ್ಲಿ ನನ್ನದೇನು ಹೇಳಲು ಇಲ್ಲ. ನಾನು ಏನೇನು ಮಾತನಾಡಬೇಕೋ ಅದನ್ನು ಸದನದಲ್ಲಿ ಮಾತನಾಡಿದ್ದೇನೆ. ಮಿಕ್ಕಿದ್ದನ್ನು ವಿಡಿಯೋ ನೋಡಿದ ನಂತರ ನಿರ್ಧರಿಸುತ್ತೇನೆ’ ಎಂದರು.
https://youtu.be/diB3eIDIsiY
ಇನ್ನೂ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುತ್ತಾ, ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡುವುದು ಬೇಡ ಎಂದು ಹೇಳಿದವರು ಯಾರು? ಅದರಲ್ಲಿ ಶಾಕ್ ಆದರೂ ಇರಲಿ, ಏನಾದರೂ ಇರಲಿ. ಅವರಿಗೆ ಒಳ್ಳೆಯದಾಗಲಿ ಪಾಪ’ ಎಂದರು


